Homeಮುಖಪುಟಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

- Advertisement -
- Advertisement -

ಹೆಚ್ಚುತ್ತಿರುವ ಅಸಹಿಷ್ಣುತೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಎಂಟು ತಿಂಗಳ ಹಿಂದೆ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಅವರಿಗೆ ಮರಳಿ ಕರ್ತವ್ಯಕ್ಕೆ ಬರುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಕರ್ತವ್ಯಕ್ಕೆ ಸೇರಲು ಕೇಂದ್ರ ಸರ್ಕಾರ ತಿಳಿಸಿದೆಯಾದರು ಕಣ್ಣನ್ ಅವರು ಸರ್ಕಾರಿ ಸೇವೆಯಲ್ಲಿ ಮತ್ತೆ ಸೇರ್ಪಡೆಗೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

“ನನ್ನನ್ನು ಕರ್ತವ್ಯಕ್ಕೆ ಮತ್ತೆ ಸೇರಲು ಕೇಳಿಕೊಂಡ ಸರ್ಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅವರ ಅಧೀನೆಯಲ್ಲಿ ಇಡಲು ಇದನ್ನು ಕಳುಹಿಸಿದ್ದಾರೆ, ಕೊರೋನಾ ವಿರುದ್ದ ನಾನು ಈಗಾಲೇ ಕೆಲಸ ಮಾಡುತ್ತಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ವಾಲಂಟೀಯರ್‌ ಆಗಿ ಕೆಲಸ ಮಾಡುತ್ತೇನೆಯೇ ಹೊರತು ಮತ್ತೇ ಐಎಎಸ್ ಸೇವೆಗೆ ಸೇರುವುದಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಇದೀಗ ಕೆಲವು ಸೇವೆಯಲ್ಲಿ ತೊಡಗಿದ್ದೇನೆ. ಇದನ್ನು ಮುಂದುವರಿಸಲು ನಾನು ಬಯಸುತ್ತೇನೆ. ಸರ್ಕಾರ ಬಯಸಿದರೆ ನಾನು ದಾದ್ರಾ ಮತ್ತು ನಗರ ಹವೇಲಿ ಮತ್ತು ದೇಶದ ಯಾವುದೇ ಭಾಗಗಳಿಗೆ ಹೋಗತ್ತೇನೆ, ಆದರೆ ಸ್ವಯಂಸೇವಕರಾಗಿ ಮಾತ್ರ. ಐಎಎಸ್ ತೊರೆಯುವುದು ಚೆನ್ನಾಗಿ ಯೋಚಿಸಿ ಕೈಗೊಂಡ ನಿರ್ಧಾರ ಹಾಗೂ ಅದಕ್ಕೆ ನಾನು ಬದ್ದನಾಗಿದ್ದೇನೆ ”ಎಂದು ಕಣ್ಣನ್ ಹೇಳಿದ್ದಾರೆ.

ಗೋಪಿನಾಥನ್ ಎಂಟು ತಿಂಗಳ ಹಿಂದೆ ರಾಜಿನಾಮೆ ನೀಡಿದ್ದರೂ, ಸರ್ಕಾರ ಇನ್ನೂ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾನು ರಾಜಿನಾಮೆ ನೀಡಿದ್ದು ಏಕೆಂದರೆ… : ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಸಂದರ್ಶನ


“ನನ್ನನ್ನು ಸರ್ಕಾರವೂ ಹಿಂತಿರುಗಲು ಕೇಳಿಕೊಳ್ಳುವುದು ಒಳ್ಳೆಯ ಉದ್ದೇಶದಿಂದಲ್ಲ ಎಂದು ನಾನು ಭಾವಿಸುತ್ತೇನೆ. ಕೊರೊನಾ ವಿರುದ್ದ ನಾನು ಮಹಾರಾಷ್ಟ್ರದ ಕೆಲವು ಎನ್‌ಜಿಒಗಳೊಂದಿಗೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ. ಸೇವೆ ಮಾಡಲು ನನಗೆ ಐಎಎಸ್ ಟ್ಯಾಗ್ ಅಗತ್ಯವಿಲ್ಲ. ನನ್ನ ಪ್ರಸ್ತುತ ಸ್ವಾತಂತ್ರ್ಯದ ಬಗ್ಗೆ ನನಗೆ ಸಂತೋಷವಿದೆ ”ಎಂದು ಅವರು ಹೇಳಿದರು.

ಈ ಹಿಂದೆ ಕೇರಳದಲ್ಲಿ ಉಂಟಾದ 2018ರ ಪ್ರವಾಹದ ಸಂದರ್ಭದಲ್ಲಿ ಅವರು ದಾದ್ರಾ ಮತ್ತು ನಗರ ಹವೇಲಿ ಆಡಳಿತದ ಚೆಕ್ ಹಸ್ತಾಂತರಿಸಿ ಸದ್ದಿಲ್ಲದೆ ಸ್ಥಳದಿಂದ ಹೊರಟು ಹೋಗಿದ್ದರು. ರಜೆಯಲ್ಲಿದ್ದಾಗ ಪರಿಹಾರ ಸಾಮಗ್ರಿಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಮೂಲಕ ಎಂಟು ದಿನಗಳ ಕಾಲ ವಿವಿಧ ಪರಿಹಾರ ಶಿಬಿರಗಳಲ್ಲಿ ಕೆಲಸ ಮಾಡಿದ್ದ ಕಣ್ಣನ್ ತನ್ನ ಬ್ಯಾಚ್-ಮೇಟ್ ಆಗಿದ್ದ ಎರ್ನಾಕುಲಂ ಜಿಲ್ಲಾಧಿಕಾರಿ ವೈ ಎಸ್ ಸಫರುಲ್ಲಾ ಅವರನ್ನು ಗುರುತಿಸಿದ ನಂತರ ಅಲ್ಲಿಂದ ಅವರು ಹೊರಟು ಹೋಗಿದ್ದರು.

ಗೋಪಿನಾಥನ್ ಅವರ ಸೇವೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಂತರದ ದಿನಗಳಲ್ಲಿ ವೈರಲ್ ಆಗಿತ್ತು. ಕಣ್ಣನ್ ಗೋಪಿನಾಥನ್ ಆಲಪ್ಪುಳ ಜಿಲ್ಲೆಯ ಎರಾಮಲ್ಲೂರ್ ಮೂಲದವರು. ಇವರು ರಾಜಿನಾಮೆ ನೀಡುವಾಗ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...