Homeಮುಖಪುಟಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

- Advertisement -
- Advertisement -

ಹೆಚ್ಚುತ್ತಿರುವ ಅಸಹಿಷ್ಣುತೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಎಂಟು ತಿಂಗಳ ಹಿಂದೆ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಅವರಿಗೆ ಮರಳಿ ಕರ್ತವ್ಯಕ್ಕೆ ಬರುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಕರ್ತವ್ಯಕ್ಕೆ ಸೇರಲು ಕೇಂದ್ರ ಸರ್ಕಾರ ತಿಳಿಸಿದೆಯಾದರು ಕಣ್ಣನ್ ಅವರು ಸರ್ಕಾರಿ ಸೇವೆಯಲ್ಲಿ ಮತ್ತೆ ಸೇರ್ಪಡೆಗೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

“ನನ್ನನ್ನು ಕರ್ತವ್ಯಕ್ಕೆ ಮತ್ತೆ ಸೇರಲು ಕೇಳಿಕೊಂಡ ಸರ್ಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅವರ ಅಧೀನೆಯಲ್ಲಿ ಇಡಲು ಇದನ್ನು ಕಳುಹಿಸಿದ್ದಾರೆ, ಕೊರೋನಾ ವಿರುದ್ದ ನಾನು ಈಗಾಲೇ ಕೆಲಸ ಮಾಡುತ್ತಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ವಾಲಂಟೀಯರ್‌ ಆಗಿ ಕೆಲಸ ಮಾಡುತ್ತೇನೆಯೇ ಹೊರತು ಮತ್ತೇ ಐಎಎಸ್ ಸೇವೆಗೆ ಸೇರುವುದಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಇದೀಗ ಕೆಲವು ಸೇವೆಯಲ್ಲಿ ತೊಡಗಿದ್ದೇನೆ. ಇದನ್ನು ಮುಂದುವರಿಸಲು ನಾನು ಬಯಸುತ್ತೇನೆ. ಸರ್ಕಾರ ಬಯಸಿದರೆ ನಾನು ದಾದ್ರಾ ಮತ್ತು ನಗರ ಹವೇಲಿ ಮತ್ತು ದೇಶದ ಯಾವುದೇ ಭಾಗಗಳಿಗೆ ಹೋಗತ್ತೇನೆ, ಆದರೆ ಸ್ವಯಂಸೇವಕರಾಗಿ ಮಾತ್ರ. ಐಎಎಸ್ ತೊರೆಯುವುದು ಚೆನ್ನಾಗಿ ಯೋಚಿಸಿ ಕೈಗೊಂಡ ನಿರ್ಧಾರ ಹಾಗೂ ಅದಕ್ಕೆ ನಾನು ಬದ್ದನಾಗಿದ್ದೇನೆ ”ಎಂದು ಕಣ್ಣನ್ ಹೇಳಿದ್ದಾರೆ.

ಗೋಪಿನಾಥನ್ ಎಂಟು ತಿಂಗಳ ಹಿಂದೆ ರಾಜಿನಾಮೆ ನೀಡಿದ್ದರೂ, ಸರ್ಕಾರ ಇನ್ನೂ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾನು ರಾಜಿನಾಮೆ ನೀಡಿದ್ದು ಏಕೆಂದರೆ… : ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಸಂದರ್ಶನ


“ನನ್ನನ್ನು ಸರ್ಕಾರವೂ ಹಿಂತಿರುಗಲು ಕೇಳಿಕೊಳ್ಳುವುದು ಒಳ್ಳೆಯ ಉದ್ದೇಶದಿಂದಲ್ಲ ಎಂದು ನಾನು ಭಾವಿಸುತ್ತೇನೆ. ಕೊರೊನಾ ವಿರುದ್ದ ನಾನು ಮಹಾರಾಷ್ಟ್ರದ ಕೆಲವು ಎನ್‌ಜಿಒಗಳೊಂದಿಗೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ. ಸೇವೆ ಮಾಡಲು ನನಗೆ ಐಎಎಸ್ ಟ್ಯಾಗ್ ಅಗತ್ಯವಿಲ್ಲ. ನನ್ನ ಪ್ರಸ್ತುತ ಸ್ವಾತಂತ್ರ್ಯದ ಬಗ್ಗೆ ನನಗೆ ಸಂತೋಷವಿದೆ ”ಎಂದು ಅವರು ಹೇಳಿದರು.

ಈ ಹಿಂದೆ ಕೇರಳದಲ್ಲಿ ಉಂಟಾದ 2018ರ ಪ್ರವಾಹದ ಸಂದರ್ಭದಲ್ಲಿ ಅವರು ದಾದ್ರಾ ಮತ್ತು ನಗರ ಹವೇಲಿ ಆಡಳಿತದ ಚೆಕ್ ಹಸ್ತಾಂತರಿಸಿ ಸದ್ದಿಲ್ಲದೆ ಸ್ಥಳದಿಂದ ಹೊರಟು ಹೋಗಿದ್ದರು. ರಜೆಯಲ್ಲಿದ್ದಾಗ ಪರಿಹಾರ ಸಾಮಗ್ರಿಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಮೂಲಕ ಎಂಟು ದಿನಗಳ ಕಾಲ ವಿವಿಧ ಪರಿಹಾರ ಶಿಬಿರಗಳಲ್ಲಿ ಕೆಲಸ ಮಾಡಿದ್ದ ಕಣ್ಣನ್ ತನ್ನ ಬ್ಯಾಚ್-ಮೇಟ್ ಆಗಿದ್ದ ಎರ್ನಾಕುಲಂ ಜಿಲ್ಲಾಧಿಕಾರಿ ವೈ ಎಸ್ ಸಫರುಲ್ಲಾ ಅವರನ್ನು ಗುರುತಿಸಿದ ನಂತರ ಅಲ್ಲಿಂದ ಅವರು ಹೊರಟು ಹೋಗಿದ್ದರು.

ಗೋಪಿನಾಥನ್ ಅವರ ಸೇವೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಂತರದ ದಿನಗಳಲ್ಲಿ ವೈರಲ್ ಆಗಿತ್ತು. ಕಣ್ಣನ್ ಗೋಪಿನಾಥನ್ ಆಲಪ್ಪುಳ ಜಿಲ್ಲೆಯ ಎರಾಮಲ್ಲೂರ್ ಮೂಲದವರು. ಇವರು ರಾಜಿನಾಮೆ ನೀಡುವಾಗ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....