Homeಮುಖಪುಟಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್

- Advertisement -
- Advertisement -

ಹೆಚ್ಚುತ್ತಿರುವ ಅಸಹಿಷ್ಣುತೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಎಂಟು ತಿಂಗಳ ಹಿಂದೆ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಅವರಿಗೆ ಮರಳಿ ಕರ್ತವ್ಯಕ್ಕೆ ಬರುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಕರ್ತವ್ಯಕ್ಕೆ ಸೇರಲು ಕೇಂದ್ರ ಸರ್ಕಾರ ತಿಳಿಸಿದೆಯಾದರು ಕಣ್ಣನ್ ಅವರು ಸರ್ಕಾರಿ ಸೇವೆಯಲ್ಲಿ ಮತ್ತೆ ಸೇರ್ಪಡೆಗೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ.

“ನನ್ನನ್ನು ಕರ್ತವ್ಯಕ್ಕೆ ಮತ್ತೆ ಸೇರಲು ಕೇಳಿಕೊಂಡ ಸರ್ಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅವರ ಅಧೀನೆಯಲ್ಲಿ ಇಡಲು ಇದನ್ನು ಕಳುಹಿಸಿದ್ದಾರೆ, ಕೊರೋನಾ ವಿರುದ್ದ ನಾನು ಈಗಾಲೇ ಕೆಲಸ ಮಾಡುತ್ತಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ವಾಲಂಟೀಯರ್‌ ಆಗಿ ಕೆಲಸ ಮಾಡುತ್ತೇನೆಯೇ ಹೊರತು ಮತ್ತೇ ಐಎಎಸ್ ಸೇವೆಗೆ ಸೇರುವುದಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನು ಇದೀಗ ಕೆಲವು ಸೇವೆಯಲ್ಲಿ ತೊಡಗಿದ್ದೇನೆ. ಇದನ್ನು ಮುಂದುವರಿಸಲು ನಾನು ಬಯಸುತ್ತೇನೆ. ಸರ್ಕಾರ ಬಯಸಿದರೆ ನಾನು ದಾದ್ರಾ ಮತ್ತು ನಗರ ಹವೇಲಿ ಮತ್ತು ದೇಶದ ಯಾವುದೇ ಭಾಗಗಳಿಗೆ ಹೋಗತ್ತೇನೆ, ಆದರೆ ಸ್ವಯಂಸೇವಕರಾಗಿ ಮಾತ್ರ. ಐಎಎಸ್ ತೊರೆಯುವುದು ಚೆನ್ನಾಗಿ ಯೋಚಿಸಿ ಕೈಗೊಂಡ ನಿರ್ಧಾರ ಹಾಗೂ ಅದಕ್ಕೆ ನಾನು ಬದ್ದನಾಗಿದ್ದೇನೆ ”ಎಂದು ಕಣ್ಣನ್ ಹೇಳಿದ್ದಾರೆ.

ಗೋಪಿನಾಥನ್ ಎಂಟು ತಿಂಗಳ ಹಿಂದೆ ರಾಜಿನಾಮೆ ನೀಡಿದ್ದರೂ, ಸರ್ಕಾರ ಇನ್ನೂ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಾನು ರಾಜಿನಾಮೆ ನೀಡಿದ್ದು ಏಕೆಂದರೆ… : ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಸಂದರ್ಶನ


“ನನ್ನನ್ನು ಸರ್ಕಾರವೂ ಹಿಂತಿರುಗಲು ಕೇಳಿಕೊಳ್ಳುವುದು ಒಳ್ಳೆಯ ಉದ್ದೇಶದಿಂದಲ್ಲ ಎಂದು ನಾನು ಭಾವಿಸುತ್ತೇನೆ. ಕೊರೊನಾ ವಿರುದ್ದ ನಾನು ಮಹಾರಾಷ್ಟ್ರದ ಕೆಲವು ಎನ್‌ಜಿಒಗಳೊಂದಿಗೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ. ಸೇವೆ ಮಾಡಲು ನನಗೆ ಐಎಎಸ್ ಟ್ಯಾಗ್ ಅಗತ್ಯವಿಲ್ಲ. ನನ್ನ ಪ್ರಸ್ತುತ ಸ್ವಾತಂತ್ರ್ಯದ ಬಗ್ಗೆ ನನಗೆ ಸಂತೋಷವಿದೆ ”ಎಂದು ಅವರು ಹೇಳಿದರು.

ಈ ಹಿಂದೆ ಕೇರಳದಲ್ಲಿ ಉಂಟಾದ 2018ರ ಪ್ರವಾಹದ ಸಂದರ್ಭದಲ್ಲಿ ಅವರು ದಾದ್ರಾ ಮತ್ತು ನಗರ ಹವೇಲಿ ಆಡಳಿತದ ಚೆಕ್ ಹಸ್ತಾಂತರಿಸಿ ಸದ್ದಿಲ್ಲದೆ ಸ್ಥಳದಿಂದ ಹೊರಟು ಹೋಗಿದ್ದರು. ರಜೆಯಲ್ಲಿದ್ದಾಗ ಪರಿಹಾರ ಸಾಮಗ್ರಿಗಳನ್ನು ಲೋಡ್ ಮಾಡುವ ಮತ್ತು ಇಳಿಸುವ ಮೂಲಕ ಎಂಟು ದಿನಗಳ ಕಾಲ ವಿವಿಧ ಪರಿಹಾರ ಶಿಬಿರಗಳಲ್ಲಿ ಕೆಲಸ ಮಾಡಿದ್ದ ಕಣ್ಣನ್ ತನ್ನ ಬ್ಯಾಚ್-ಮೇಟ್ ಆಗಿದ್ದ ಎರ್ನಾಕುಲಂ ಜಿಲ್ಲಾಧಿಕಾರಿ ವೈ ಎಸ್ ಸಫರುಲ್ಲಾ ಅವರನ್ನು ಗುರುತಿಸಿದ ನಂತರ ಅಲ್ಲಿಂದ ಅವರು ಹೊರಟು ಹೋಗಿದ್ದರು.

ಗೋಪಿನಾಥನ್ ಅವರ ಸೇವೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಂತರದ ದಿನಗಳಲ್ಲಿ ವೈರಲ್ ಆಗಿತ್ತು. ಕಣ್ಣನ್ ಗೋಪಿನಾಥನ್ ಆಲಪ್ಪುಳ ಜಿಲ್ಲೆಯ ಎರಾಮಲ್ಲೂರ್ ಮೂಲದವರು. ಇವರು ರಾಜಿನಾಮೆ ನೀಡುವಾಗ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...