Homeಮುಖಪುಟಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

- Advertisement -
- Advertisement -

ಭಾರತದ ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಮಾಜಿ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಆಯ್ಕೆ ನಂತರ ಕುಸ್ತಿಪಟುಗಳು ಹಾಗೂ ಇತರೆ ಅಥ್ಲೀಟ್‌ಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಚುನಾವಣಾ ಪ್ರೋಟೋಕಾಲ್ ಅನುಸರಿಸಲು ವಿಫಲವಾದ ಕಾರಣಕ್ಕಾಗಿ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯು ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಉಲ್ಲೇಖಿಸಿರುವ ಸಚಿವಾಲಯವು, ಭಾನುವಾರದಂದು ತನ್ನ ನಿರ್ಧಾರ ಪ್ರಕಟಿಸಿದೆ.

ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ‘ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಡಿ.21 ರಂದು ಘೋಷಿಸಿದರು’ ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ಕುಸ್ತಿಪಟುಗಳು ತಯಾರಿ ಮಾಡಿಕೊಳ್ಳಲು ಕನಿಷ್ಠ 15 ದಿನಗಳ ಮೊದಲು ಸೂಚನೆ ನೀಡುವ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

‘ಪ್ರಮುಖ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ತಮ್ಮ ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಡಬ್ಲ್ಯೂಎಫ್ಐ ನಿಯಯಮಗಳು- XIರ ಪ್ರಕಾರ ‘ನೋಟಿಸ್‌ಗಳು ಮತ್ತು ಸಭೆಗಳಿಗೆ ಕೋರಂ’ ಶೀರ್ಷಿಕೆಯಡಿಯಲ್ಲಿ ಕನಿಷ್ಠ 15 ದಿನಗಳ ಮೊದಲು ಅಧಿಸೂಚನೆ ಹೊರಡಿಸಬೇಕು. ನಿರ್ರಾರ ತೆಗೆದುಕೊಳ್ಳುವಾಗ ಸಭೆಯಲ್ಲಿ 1/3 ರಷ್ಟು ಕೋರಂ ಪ್ರತಿನಿಧಿಗಳು ಇರಬೇಕು. ತುರ್ತು ಇಸಿ ಸಭೆಗೆ ಸಹ ಕನಿಷ್ಠ ಸೂಚನೆ ಅವಧಿಯು 7 ದಿನಗಳು ಹಾಗೂ 1/3 ರಷ್ಟು ಪ್ರತಿನಿಧಿಗಳ ಕೋರಂ ಅಗತ್ಯತೆ ಇದೆ’ ಎಂದು ಸಚಿವಾಲಯ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಆಡಳಿತ ಮಂಡಳಿಯು ಹಿಂದೆ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ಹೊಂದಿರುವಂತೆ ಕಾಣಿಸುತ್ತಿದೆ. ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿರುವಂತೆ ತೋರುತ್ತಿದೆ ಎಂದು ಸಚಿವಾಲಯ ಆರೋಪಿಸಿದೆ.

‘ಫೆಡರೇಶನ್‌ನ ವ್ಯವಹಾರವನ್ನು ಆಟಗಾರರ ಮೇಲೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮಾಜಿ ಪದಾಧಿಕಾರಿಗಳ ಆವರಣದಿಂದ ನಿಯಂತ್ರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ’ ಎಂದು ಸಚಿವಾಲಯ ಹೇಳಿದೆ.

‘ಡಬ್ಲ್ಯುಎಫ್ಐನ ನೂತನ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ತೆಗೆದುಕೊಂಡಿರುವ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳನ್ನು ನಿರ್ಲಕ್ಷಿಸಿದೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ’ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Really its a great victory for the sports community. Now its ur challenge to see that these people should be punished properly. Then only this ugly chapter can be closed. Dont allow him to go scot free. May god bless u all.👌👌👍👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...