Homeಮುಖಪುಟಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

- Advertisement -
- Advertisement -

ಭಾರತದ ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಮಾಜಿ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಆಯ್ಕೆ ನಂತರ ಕುಸ್ತಿಪಟುಗಳು ಹಾಗೂ ಇತರೆ ಅಥ್ಲೀಟ್‌ಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಚುನಾವಣಾ ಪ್ರೋಟೋಕಾಲ್ ಅನುಸರಿಸಲು ವಿಫಲವಾದ ಕಾರಣಕ್ಕಾಗಿ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯು ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಉಲ್ಲೇಖಿಸಿರುವ ಸಚಿವಾಲಯವು, ಭಾನುವಾರದಂದು ತನ್ನ ನಿರ್ಧಾರ ಪ್ರಕಟಿಸಿದೆ.

ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ‘ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಡಿ.21 ರಂದು ಘೋಷಿಸಿದರು’ ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ಕುಸ್ತಿಪಟುಗಳು ತಯಾರಿ ಮಾಡಿಕೊಳ್ಳಲು ಕನಿಷ್ಠ 15 ದಿನಗಳ ಮೊದಲು ಸೂಚನೆ ನೀಡುವ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

‘ಪ್ರಮುಖ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ತಮ್ಮ ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಡಬ್ಲ್ಯೂಎಫ್ಐ ನಿಯಯಮಗಳು- XIರ ಪ್ರಕಾರ ‘ನೋಟಿಸ್‌ಗಳು ಮತ್ತು ಸಭೆಗಳಿಗೆ ಕೋರಂ’ ಶೀರ್ಷಿಕೆಯಡಿಯಲ್ಲಿ ಕನಿಷ್ಠ 15 ದಿನಗಳ ಮೊದಲು ಅಧಿಸೂಚನೆ ಹೊರಡಿಸಬೇಕು. ನಿರ್ರಾರ ತೆಗೆದುಕೊಳ್ಳುವಾಗ ಸಭೆಯಲ್ಲಿ 1/3 ರಷ್ಟು ಕೋರಂ ಪ್ರತಿನಿಧಿಗಳು ಇರಬೇಕು. ತುರ್ತು ಇಸಿ ಸಭೆಗೆ ಸಹ ಕನಿಷ್ಠ ಸೂಚನೆ ಅವಧಿಯು 7 ದಿನಗಳು ಹಾಗೂ 1/3 ರಷ್ಟು ಪ್ರತಿನಿಧಿಗಳ ಕೋರಂ ಅಗತ್ಯತೆ ಇದೆ’ ಎಂದು ಸಚಿವಾಲಯ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಆಡಳಿತ ಮಂಡಳಿಯು ಹಿಂದೆ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ಹೊಂದಿರುವಂತೆ ಕಾಣಿಸುತ್ತಿದೆ. ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿರುವಂತೆ ತೋರುತ್ತಿದೆ ಎಂದು ಸಚಿವಾಲಯ ಆರೋಪಿಸಿದೆ.

‘ಫೆಡರೇಶನ್‌ನ ವ್ಯವಹಾರವನ್ನು ಆಟಗಾರರ ಮೇಲೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮಾಜಿ ಪದಾಧಿಕಾರಿಗಳ ಆವರಣದಿಂದ ನಿಯಂತ್ರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ’ ಎಂದು ಸಚಿವಾಲಯ ಹೇಳಿದೆ.

‘ಡಬ್ಲ್ಯುಎಫ್ಐನ ನೂತನ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ತೆಗೆದುಕೊಂಡಿರುವ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳನ್ನು ನಿರ್ಲಕ್ಷಿಸಿದೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ’ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Really its a great victory for the sports community. Now its ur challenge to see that these people should be punished properly. Then only this ugly chapter can be closed. Dont allow him to go scot free. May god bless u all.👌👌👍👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...