Homeಮುಖಪುಟಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

- Advertisement -
- Advertisement -

ಭಾರತದ ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಮಾಜಿ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಆಯ್ಕೆ ನಂತರ ಕುಸ್ತಿಪಟುಗಳು ಹಾಗೂ ಇತರೆ ಅಥ್ಲೀಟ್‌ಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಚುನಾವಣಾ ಪ್ರೋಟೋಕಾಲ್ ಅನುಸರಿಸಲು ವಿಫಲವಾದ ಕಾರಣಕ್ಕಾಗಿ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯು ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಉಲ್ಲೇಖಿಸಿರುವ ಸಚಿವಾಲಯವು, ಭಾನುವಾರದಂದು ತನ್ನ ನಿರ್ಧಾರ ಪ್ರಕಟಿಸಿದೆ.

ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ‘ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಡಿ.21 ರಂದು ಘೋಷಿಸಿದರು’ ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ಕುಸ್ತಿಪಟುಗಳು ತಯಾರಿ ಮಾಡಿಕೊಳ್ಳಲು ಕನಿಷ್ಠ 15 ದಿನಗಳ ಮೊದಲು ಸೂಚನೆ ನೀಡುವ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

‘ಪ್ರಮುಖ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ತಮ್ಮ ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಡಬ್ಲ್ಯೂಎಫ್ಐ ನಿಯಯಮಗಳು- XIರ ಪ್ರಕಾರ ‘ನೋಟಿಸ್‌ಗಳು ಮತ್ತು ಸಭೆಗಳಿಗೆ ಕೋರಂ’ ಶೀರ್ಷಿಕೆಯಡಿಯಲ್ಲಿ ಕನಿಷ್ಠ 15 ದಿನಗಳ ಮೊದಲು ಅಧಿಸೂಚನೆ ಹೊರಡಿಸಬೇಕು. ನಿರ್ರಾರ ತೆಗೆದುಕೊಳ್ಳುವಾಗ ಸಭೆಯಲ್ಲಿ 1/3 ರಷ್ಟು ಕೋರಂ ಪ್ರತಿನಿಧಿಗಳು ಇರಬೇಕು. ತುರ್ತು ಇಸಿ ಸಭೆಗೆ ಸಹ ಕನಿಷ್ಠ ಸೂಚನೆ ಅವಧಿಯು 7 ದಿನಗಳು ಹಾಗೂ 1/3 ರಷ್ಟು ಪ್ರತಿನಿಧಿಗಳ ಕೋರಂ ಅಗತ್ಯತೆ ಇದೆ’ ಎಂದು ಸಚಿವಾಲಯ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಆಡಳಿತ ಮಂಡಳಿಯು ಹಿಂದೆ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ಹೊಂದಿರುವಂತೆ ಕಾಣಿಸುತ್ತಿದೆ. ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿರುವಂತೆ ತೋರುತ್ತಿದೆ ಎಂದು ಸಚಿವಾಲಯ ಆರೋಪಿಸಿದೆ.

‘ಫೆಡರೇಶನ್‌ನ ವ್ಯವಹಾರವನ್ನು ಆಟಗಾರರ ಮೇಲೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮಾಜಿ ಪದಾಧಿಕಾರಿಗಳ ಆವರಣದಿಂದ ನಿಯಂತ್ರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ’ ಎಂದು ಸಚಿವಾಲಯ ಹೇಳಿದೆ.

‘ಡಬ್ಲ್ಯುಎಫ್ಐನ ನೂತನ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ತೆಗೆದುಕೊಂಡಿರುವ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳನ್ನು ನಿರ್ಲಕ್ಷಿಸಿದೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ’ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Really its a great victory for the sports community. Now its ur challenge to see that these people should be punished properly. Then only this ugly chapter can be closed. Dont allow him to go scot free. May god bless u all.👌👌👍👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...