Homeಮುಖಪುಟಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

- Advertisement -
- Advertisement -

ಭಾರತದ ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಮಾಜಿ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಆಯ್ಕೆ ನಂತರ ಕುಸ್ತಿಪಟುಗಳು ಹಾಗೂ ಇತರೆ ಅಥ್ಲೀಟ್‌ಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಚುನಾವಣಾ ಪ್ರೋಟೋಕಾಲ್ ಅನುಸರಿಸಲು ವಿಫಲವಾದ ಕಾರಣಕ್ಕಾಗಿ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯು ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಉಲ್ಲೇಖಿಸಿರುವ ಸಚಿವಾಲಯವು, ಭಾನುವಾರದಂದು ತನ್ನ ನಿರ್ಧಾರ ಪ್ರಕಟಿಸಿದೆ.

ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ‘ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಡಿ.21 ರಂದು ಘೋಷಿಸಿದರು’ ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ಕುಸ್ತಿಪಟುಗಳು ತಯಾರಿ ಮಾಡಿಕೊಳ್ಳಲು ಕನಿಷ್ಠ 15 ದಿನಗಳ ಮೊದಲು ಸೂಚನೆ ನೀಡುವ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

‘ಪ್ರಮುಖ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ತಮ್ಮ ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಡಬ್ಲ್ಯೂಎಫ್ಐ ನಿಯಯಮಗಳು- XIರ ಪ್ರಕಾರ ‘ನೋಟಿಸ್‌ಗಳು ಮತ್ತು ಸಭೆಗಳಿಗೆ ಕೋರಂ’ ಶೀರ್ಷಿಕೆಯಡಿಯಲ್ಲಿ ಕನಿಷ್ಠ 15 ದಿನಗಳ ಮೊದಲು ಅಧಿಸೂಚನೆ ಹೊರಡಿಸಬೇಕು. ನಿರ್ರಾರ ತೆಗೆದುಕೊಳ್ಳುವಾಗ ಸಭೆಯಲ್ಲಿ 1/3 ರಷ್ಟು ಕೋರಂ ಪ್ರತಿನಿಧಿಗಳು ಇರಬೇಕು. ತುರ್ತು ಇಸಿ ಸಭೆಗೆ ಸಹ ಕನಿಷ್ಠ ಸೂಚನೆ ಅವಧಿಯು 7 ದಿನಗಳು ಹಾಗೂ 1/3 ರಷ್ಟು ಪ್ರತಿನಿಧಿಗಳ ಕೋರಂ ಅಗತ್ಯತೆ ಇದೆ’ ಎಂದು ಸಚಿವಾಲಯ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಆಡಳಿತ ಮಂಡಳಿಯು ಹಿಂದೆ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ಹೊಂದಿರುವಂತೆ ಕಾಣಿಸುತ್ತಿದೆ. ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿರುವಂತೆ ತೋರುತ್ತಿದೆ ಎಂದು ಸಚಿವಾಲಯ ಆರೋಪಿಸಿದೆ.

‘ಫೆಡರೇಶನ್‌ನ ವ್ಯವಹಾರವನ್ನು ಆಟಗಾರರ ಮೇಲೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮಾಜಿ ಪದಾಧಿಕಾರಿಗಳ ಆವರಣದಿಂದ ನಿಯಂತ್ರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ’ ಎಂದು ಸಚಿವಾಲಯ ಹೇಳಿದೆ.

‘ಡಬ್ಲ್ಯುಎಫ್ಐನ ನೂತನ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ತೆಗೆದುಕೊಂಡಿರುವ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳನ್ನು ನಿರ್ಲಕ್ಷಿಸಿದೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ’ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Really its a great victory for the sports community. Now its ur challenge to see that these people should be punished properly. Then only this ugly chapter can be closed. Dont allow him to go scot free. May god bless u all.👌👌👍👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...