Homeಮುಖಪುಟಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲದೇ 13 ರಾಜ್ಯಗಳು ವಿರೋಧಿಸಿವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲದೇ 13 ರಾಜ್ಯಗಳು ವಿರೋಧಿಸಿವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ಬಯಲಾಗಿದೆ - ಶಿವಸುಂದರ್

- Advertisement -
- Advertisement -

ಒಳಮೀಸಲಾತಿ ವಿಚಾರವು ನ್ಯಾಯಾಲಯದ ಅಧೀನದಲ್ಲಿರುವುದರಿಂದ, ಅಲ್ಲದೇ ಸಂವಿಧಾನ ತಿದ್ದುಪಡಿಗೆ 13 ರಾಜ್ಯಗಳು ವಿರೋಧಿಸಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಮಂತ್ರಿ ನಾರಾಯಣಸ್ವಾಮಿಯವರು ತಿಳಿಸಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾದ ಜಿ.ವಿ.ಎಲ್ ನರಸಿಂಹರಾವ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಸಚಿವರು, “ಸಂವಿಧಾನದಲ್ಲಿ ಈಗಿರುವ ಅವಕಾಶಗಳಂತೆ ಒಳಮೀಸಲಾತಿಯನ್ನು ಕಲ್ಪಿಸಲು ಸಾಧ್ಯವಾಗದು. ಇದರ ಬಗ್ಗೆ ರಚಿಸಲಾಗಿದ್ದ ರಾಷ್ಟ್ರೀಯ ಆಯೋಗವು ಒಳಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ತರಲು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡುವಂತೆ ಕೋರಲಾಗಿತ್ತು. ಈವರೆಗೆ 20ರಾಜ್ಯ ಸರ್ಕಾರಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಿವೆ. ಅದರಲ್ಲಿ 7 ರಾಜ್ಯಗಳು ಒಳಮೀಸಲಾತಿಯ ಪರವಾಗಿಯೂ, 13 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶವು ಒಳಮೀಸಲಾತಿಯ ವಿರುದ್ಧವಾಗಿಯೂ ಅಭಿಪ್ರಾಯಗಳನ್ನು ನೀಡಿವೆ” ಎಂದು ತಿಳಿಸಿದ್ದಾರೆ.

ಜಿ.ವಿ.ಎಲ್ ನರಸಿಂಹರಾವ್ ಅವರು, “ಒಳಮೀಸಲಾತಿಯ ಬಗ್ಗೆ ಈವರೆಗೆ ಬೇರೆಬೇರೆ ರಾಜ್ಯಗಳು ನೀಡಿರುವ ಅಭಿಪ್ರಾಯಗಳೇನು?  ಕೇಂದ್ರ ಸರ್ಕಾರದ ಮುಂದೆ ಸಂವಿಧಾನಕ್ಕೆ ತಿದ್ದುಪಡಿ ತಂದು ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಅಧಿಕಾರ ನೀಡುವ ಯೋಜನೆ ಇದೆಯೇ? ಮತ್ತು ಅಂಥ ಯೋಜನೆಯಿದ್ದಲ್ಲಿ ಎಷ್ಟು ಕಾಲಾವಧಿಯೊಳಗೆ ಅದು ಜಾರಿಯಾಗಲಿದೆ ಎಂಬುದರ ಕುರಿತು ಪ್ರಶ್ನೆಗಳನ್ನು ಕೇಳಿದ್ದರು.

ಇದಕ್ಕೆ ಮೇಲಿನಂತೆ ಉತ್ತರಿಸಿರುವ ಸಚಿವರು, “ಹಲವು ರಾಜ್ಯಗಳು ಒಳಮೀಸಲಾತಿಯನ್ನು ವಿರೋಧಿಸಿವೆ. ಎಲ್ಲಕ್ಕಿಂತ ಹೆಚ್ಚಾಗಿ ವಿಚಾರವು ನ್ಯಾಯಾಲಯದ ಅಧೀನದಲ್ಲಿದೆ ಮತ್ತು ಐವರು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಏಳು ನ್ಯಾಯಾಧೀಶರ ಅಥವಾ ಹೆಚ್ಚಿನ ಪೀಠಕ್ಕೆ ವರ್ಗಾಯಿಸಬೇಕೆಂದು ಕೋರಿದೆ” ಎಂದು ಉತ್ತರವನ್ನು ಮುಗಿಸಿದ್ದಾರೆ. ಅಲ್ಲಿಗೆ ಕೇಂದ್ರ ಸರ್ಕಾರ ಏನು ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಿಂತಕರಾದ ಶಿವಸುಂದರ್, “ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ನಡೆದ ಪ್ರಶ್ನೋತ್ತರಗಳಲ್ಲಿ ಬಯಲಾಗಿದೆ” ಎಂದು ಕಿಡಿಕಾರಿದ್ದಾರೆ.

ತಮ್ಮ ಜಸ್ಟ್‌ ಆಸ್ಕಿಂಗ್ ಲೇಖನದಲ್ಲಿ ವಿವರವಾಗಿ ಬರೆದಿರುವ ಅವರು, “ಕರ್ನಾಟಕದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಘಟಾನುಘಟಿಗಳೆಲ್ಲಾ ಒಳಮೀಸಲಾತಿ ಒದಗಿಸಲು ಮೋದಿ ಸರ್ಕಾರ ಕಟಿಬದ್ಧವಾಗಿದೆ ಎಂದೆಲ್ಲಾ ಬೊಗಳೆ ಬಿಟ್ಟಿದ್ದರು. ಆದರೆ ಮೇಲಿನ ಉತ್ತರದಲ್ಲಿ ಸ್ಪಷ್ಟವಾಗಿರುವಂತೆ ಒಳಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ತರುವ ಉದ್ದೇಶವಿದೆಯೇ ಎಂಬ ಪ್ರಶ್ನೆಗೆ ಸರ್ಕಾರ ಉತ್ತರವನ್ನೇ ಕೊಡದೆ ಜಾರಿ ಕೊಂಡಿದೆ. ಅಷ್ಟು ಮಾತ್ರವಲ್ಲದೇ ಈ ವಿಷಯವು ಸಬ್ ಜುಡೀಸ್- ಅರ್ಥಾತ್ ನ್ಯಾಯಾಲಯದ ಅಧೀನದಲ್ಲಿರುವುದರಿಂದ ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಸುಪ್ರೀಂ ಕೋರ್ಟಿನ ಅಧೀನದಲ್ಲಿರುವ ಅಥವಾ ಸುಪ್ರೀಂ ಕೋರ್ಟು ಆದೇಶ ನೀಡಿದ್ದರು ಅದಕ್ಕೆ ತದ್ವಿರುದ್ಧವಾದ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿಲ್ಲವೇ? ಇತಿಹಾಸದಲ್ಲಿ ಸಂಸತ್ತು ತನ್ನ ಸಾರ್ವಭೌಮತೆಯನ್ನು ಚಲಾಯಿಸಿ ಸಂವಿಧಾನ ತಿದ್ದುಪಡಿಯ ಮೂಲಕ ಸುಪ್ರೀಂ ಕೋರ್ಟು ಆದೇಶಗಳನ್ನು ಅಮಾನ್ಯಗೊಳಿಸಿಲ್ಲವೇ? ಅಷ್ಟೆಲ್ಲ ಏಕೆ? ದೆಹಲಿ ಸರ್ಕಾರಕ್ಕೆ ಅಧಿಕಾರಿಶಾಹಿಯ ಮೇಲಿನ ಅಧಿಕಾರದ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟು ಎತ್ತಿ ಹಿಡಿದರೂ ಮೋದಿ ಸರ್ಕಾರ ಅದನ್ನು ಅಮಾನ್ಯಗೊಳಿಸಲು ಸುಗ್ರೀವಾಜ್ಞೆ ತರಲಿಲ್ಲವೇ? ಈಗ ಅದನ್ನು ಸಂಸತ್ತಿನಲ್ಲಿ ಮಸೂದೆಯಾಗಿ ಮಂಡಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟಿನ ಉನ್ನತ ಪೀಠ ಈ ವಿಷಯದಲ್ಲಿ ಇನ್ನು ರಚನೆಯೇ ಆಗಿಲ್ಲ. ಆದರೆ ಸುಪ್ರೀಂ ಪೀಠ ವಿಚಾರಣಾ ನೋಟೀಸ್ ಕೊಟ್ಟ ವಿಷಯಗಳಲ್ಲೂ ಸಂಸತ್ತು ಕಾನೂನು ಮಾಡಿಲ್ಲವೇ? ಸಂವಿಧಾನ ತಿದ್ದುಪಡಿಗಳನ್ನು ಮಾಡಿಲ್ಲವೇ? ಅಂದರೆ ಮೋದಿ ಸರ್ಕಾರ ಒಳಮೀಸಲಾತಿ ನಿರಾಕರಿಸಲು ಸಬ್ ಜುಡೀಸ್ ಸಬೂಬು ಹೇಳುತ್ತಿದೆಯಷ್ಟೆ. ಅದರ ಜೊತೆಗೆ 20 ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಒಪ್ಪಿರುವುವು ಕೇವಲ 7 ರಾಜ್ಯಗಳು- ಉಳಿದ 13 ರಾಜ್ಯಗಳು ವಿರೋಧಿಸಿವೆ ಎಂಬ ನೆಪವೂ ಈಗ ಮೋದಿ ಸರ್ಕಾರ ಮುಂದಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ವಾಸ್ತವದಲ್ಲಿ ಸುಪ್ರೀಂನ ಐದು ನ್ಯಾಯಾಧೀಶರ ಪೀಠ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯದ ಬಗ್ಗೆ, ಏಳು ನ್ಯಾಯಾಧೀಶರ ಪೀಠ ರಚಿಸಲು ಸಲಹೆ ಮಾಡಿದ್ದು 2020ರ ಆಗಸ್ಟ್ 20 ರಂದು. ಅದು ಸಹ ದವಿಂದರ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್ ಪ್ರಕರಣದಲ್ಲಿ. ಹಾಗಿದ್ದರೂ ಕೂಡ ಕಳೆದ ಎರಡು ವರ್ಷಗಳಲ್ಲಿ ಒಳಮೀಸಲಾತಿ ವಿಷಯವು ಸಬ್ ಜುಡೀಸ್ ಆಗಿದೆ ಎಂದು ಒಮ್ಮೆಯೂ ಹೇಳದೆ ಕರ್ನಾಟಕದ ಬಿಜೆಪಿ , ಸಂಘಪರಿವಾರ ಮತ್ತು ಕೇಂದ್ರದ ಮೋದಿ ಸರ್ಕಾರ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ಕೊಟ್ಟಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದೇ ಪ್ರಶ್ನೆಯನ್ನು ಹೊರಟಗಾರರು ಕೇಳಿದಾಗ ಸಂವಿಧಾನ ತಿದ್ದುಪಡಿಯನ್ನು ಮಾಡದೆ, ಸುಪ್ರೀಂ ಕೋರ್ಟಿಗೂ ಹೋಗದೆ ಹೇಗೋ ಒಳಮೀಸಲಾತಿ ಕೊಟ್ಟೆ ತೀರುವುದಾಗಿ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರು ಸಮುದಾಯಕ್ಕೆ ಮೋಸ ಮಾಡಿದ್ದೇಕೆ? ಇದಕ್ಕೆ ಸಂಘಪರಿವಾರ ಉತ್ತರಿಸುತ್ತದೆಯೇ? ಉತ್ತರಿಸುವಂತೆ ಸಮುದಾಯ ಪಟ್ಟುಹಿಡಿದು ಕೇಳುತ್ತದೆಯೇ? ಅಥವಾ 2024ರ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಣ್ಣದ ಮಾತಾಡಿ ಸಮುದಾಯವನ್ನು ಮೋಸಗೊಳಿಸುವ ಪ್ರಯತ್ನಗಳನ್ನು ಮಾಡುತ್ತದೆಯೇ? ಎಂದು ಶಿವಸುಂದರ್ ಕೇಳಿದ್ದಾರೆ.

ದೇಶಮಟ್ಟದಲ್ಲಿ ಒಳಮೀಸಲಾತಿಗೆ ದೊಡ್ಡ ಹೋರಾಟ ಕಟ್ಟದೆ, ಬಿಜೆಪಿಯನ್ನೂ, ಸಂಘಪರಿವಾರವನ್ನೋ, ಇತರ ಪಕ್ಷಗಳನ್ನೂ ನಂಬಿ ಕೂತರೆ ಒಳಮೀಸಲಾತಿ ಕನ್ನಡಿಯೊಳಗಿನ ಗಂಟಾಗಿಯೇ ಉಳಿಯುವುದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...