Homeಮುಖಪುಟಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲದೇ 13 ರಾಜ್ಯಗಳು ವಿರೋಧಿಸಿವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲದೇ 13 ರಾಜ್ಯಗಳು ವಿರೋಧಿಸಿವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ಬಯಲಾಗಿದೆ - ಶಿವಸುಂದರ್

- Advertisement -
- Advertisement -

ಒಳಮೀಸಲಾತಿ ವಿಚಾರವು ನ್ಯಾಯಾಲಯದ ಅಧೀನದಲ್ಲಿರುವುದರಿಂದ, ಅಲ್ಲದೇ ಸಂವಿಧಾನ ತಿದ್ದುಪಡಿಗೆ 13 ರಾಜ್ಯಗಳು ವಿರೋಧಿಸಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಮಂತ್ರಿ ನಾರಾಯಣಸ್ವಾಮಿಯವರು ತಿಳಿಸಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾದ ಜಿ.ವಿ.ಎಲ್ ನರಸಿಂಹರಾವ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಸಚಿವರು, “ಸಂವಿಧಾನದಲ್ಲಿ ಈಗಿರುವ ಅವಕಾಶಗಳಂತೆ ಒಳಮೀಸಲಾತಿಯನ್ನು ಕಲ್ಪಿಸಲು ಸಾಧ್ಯವಾಗದು. ಇದರ ಬಗ್ಗೆ ರಚಿಸಲಾಗಿದ್ದ ರಾಷ್ಟ್ರೀಯ ಆಯೋಗವು ಒಳಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ತರಲು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡುವಂತೆ ಕೋರಲಾಗಿತ್ತು. ಈವರೆಗೆ 20ರಾಜ್ಯ ಸರ್ಕಾರಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಿವೆ. ಅದರಲ್ಲಿ 7 ರಾಜ್ಯಗಳು ಒಳಮೀಸಲಾತಿಯ ಪರವಾಗಿಯೂ, 13 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶವು ಒಳಮೀಸಲಾತಿಯ ವಿರುದ್ಧವಾಗಿಯೂ ಅಭಿಪ್ರಾಯಗಳನ್ನು ನೀಡಿವೆ” ಎಂದು ತಿಳಿಸಿದ್ದಾರೆ.

ಜಿ.ವಿ.ಎಲ್ ನರಸಿಂಹರಾವ್ ಅವರು, “ಒಳಮೀಸಲಾತಿಯ ಬಗ್ಗೆ ಈವರೆಗೆ ಬೇರೆಬೇರೆ ರಾಜ್ಯಗಳು ನೀಡಿರುವ ಅಭಿಪ್ರಾಯಗಳೇನು?  ಕೇಂದ್ರ ಸರ್ಕಾರದ ಮುಂದೆ ಸಂವಿಧಾನಕ್ಕೆ ತಿದ್ದುಪಡಿ ತಂದು ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಅಧಿಕಾರ ನೀಡುವ ಯೋಜನೆ ಇದೆಯೇ? ಮತ್ತು ಅಂಥ ಯೋಜನೆಯಿದ್ದಲ್ಲಿ ಎಷ್ಟು ಕಾಲಾವಧಿಯೊಳಗೆ ಅದು ಜಾರಿಯಾಗಲಿದೆ ಎಂಬುದರ ಕುರಿತು ಪ್ರಶ್ನೆಗಳನ್ನು ಕೇಳಿದ್ದರು.

ಇದಕ್ಕೆ ಮೇಲಿನಂತೆ ಉತ್ತರಿಸಿರುವ ಸಚಿವರು, “ಹಲವು ರಾಜ್ಯಗಳು ಒಳಮೀಸಲಾತಿಯನ್ನು ವಿರೋಧಿಸಿವೆ. ಎಲ್ಲಕ್ಕಿಂತ ಹೆಚ್ಚಾಗಿ ವಿಚಾರವು ನ್ಯಾಯಾಲಯದ ಅಧೀನದಲ್ಲಿದೆ ಮತ್ತು ಐವರು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಏಳು ನ್ಯಾಯಾಧೀಶರ ಅಥವಾ ಹೆಚ್ಚಿನ ಪೀಠಕ್ಕೆ ವರ್ಗಾಯಿಸಬೇಕೆಂದು ಕೋರಿದೆ” ಎಂದು ಉತ್ತರವನ್ನು ಮುಗಿಸಿದ್ದಾರೆ. ಅಲ್ಲಿಗೆ ಕೇಂದ್ರ ಸರ್ಕಾರ ಏನು ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಿಂತಕರಾದ ಶಿವಸುಂದರ್, “ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ನಡೆದ ಪ್ರಶ್ನೋತ್ತರಗಳಲ್ಲಿ ಬಯಲಾಗಿದೆ” ಎಂದು ಕಿಡಿಕಾರಿದ್ದಾರೆ.

ತಮ್ಮ ಜಸ್ಟ್‌ ಆಸ್ಕಿಂಗ್ ಲೇಖನದಲ್ಲಿ ವಿವರವಾಗಿ ಬರೆದಿರುವ ಅವರು, “ಕರ್ನಾಟಕದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಘಟಾನುಘಟಿಗಳೆಲ್ಲಾ ಒಳಮೀಸಲಾತಿ ಒದಗಿಸಲು ಮೋದಿ ಸರ್ಕಾರ ಕಟಿಬದ್ಧವಾಗಿದೆ ಎಂದೆಲ್ಲಾ ಬೊಗಳೆ ಬಿಟ್ಟಿದ್ದರು. ಆದರೆ ಮೇಲಿನ ಉತ್ತರದಲ್ಲಿ ಸ್ಪಷ್ಟವಾಗಿರುವಂತೆ ಒಳಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ತರುವ ಉದ್ದೇಶವಿದೆಯೇ ಎಂಬ ಪ್ರಶ್ನೆಗೆ ಸರ್ಕಾರ ಉತ್ತರವನ್ನೇ ಕೊಡದೆ ಜಾರಿ ಕೊಂಡಿದೆ. ಅಷ್ಟು ಮಾತ್ರವಲ್ಲದೇ ಈ ವಿಷಯವು ಸಬ್ ಜುಡೀಸ್- ಅರ್ಥಾತ್ ನ್ಯಾಯಾಲಯದ ಅಧೀನದಲ್ಲಿರುವುದರಿಂದ ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಸುಪ್ರೀಂ ಕೋರ್ಟಿನ ಅಧೀನದಲ್ಲಿರುವ ಅಥವಾ ಸುಪ್ರೀಂ ಕೋರ್ಟು ಆದೇಶ ನೀಡಿದ್ದರು ಅದಕ್ಕೆ ತದ್ವಿರುದ್ಧವಾದ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿಲ್ಲವೇ? ಇತಿಹಾಸದಲ್ಲಿ ಸಂಸತ್ತು ತನ್ನ ಸಾರ್ವಭೌಮತೆಯನ್ನು ಚಲಾಯಿಸಿ ಸಂವಿಧಾನ ತಿದ್ದುಪಡಿಯ ಮೂಲಕ ಸುಪ್ರೀಂ ಕೋರ್ಟು ಆದೇಶಗಳನ್ನು ಅಮಾನ್ಯಗೊಳಿಸಿಲ್ಲವೇ? ಅಷ್ಟೆಲ್ಲ ಏಕೆ? ದೆಹಲಿ ಸರ್ಕಾರಕ್ಕೆ ಅಧಿಕಾರಿಶಾಹಿಯ ಮೇಲಿನ ಅಧಿಕಾರದ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟು ಎತ್ತಿ ಹಿಡಿದರೂ ಮೋದಿ ಸರ್ಕಾರ ಅದನ್ನು ಅಮಾನ್ಯಗೊಳಿಸಲು ಸುಗ್ರೀವಾಜ್ಞೆ ತರಲಿಲ್ಲವೇ? ಈಗ ಅದನ್ನು ಸಂಸತ್ತಿನಲ್ಲಿ ಮಸೂದೆಯಾಗಿ ಮಂಡಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟಿನ ಉನ್ನತ ಪೀಠ ಈ ವಿಷಯದಲ್ಲಿ ಇನ್ನು ರಚನೆಯೇ ಆಗಿಲ್ಲ. ಆದರೆ ಸುಪ್ರೀಂ ಪೀಠ ವಿಚಾರಣಾ ನೋಟೀಸ್ ಕೊಟ್ಟ ವಿಷಯಗಳಲ್ಲೂ ಸಂಸತ್ತು ಕಾನೂನು ಮಾಡಿಲ್ಲವೇ? ಸಂವಿಧಾನ ತಿದ್ದುಪಡಿಗಳನ್ನು ಮಾಡಿಲ್ಲವೇ? ಅಂದರೆ ಮೋದಿ ಸರ್ಕಾರ ಒಳಮೀಸಲಾತಿ ನಿರಾಕರಿಸಲು ಸಬ್ ಜುಡೀಸ್ ಸಬೂಬು ಹೇಳುತ್ತಿದೆಯಷ್ಟೆ. ಅದರ ಜೊತೆಗೆ 20 ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಒಪ್ಪಿರುವುವು ಕೇವಲ 7 ರಾಜ್ಯಗಳು- ಉಳಿದ 13 ರಾಜ್ಯಗಳು ವಿರೋಧಿಸಿವೆ ಎಂಬ ನೆಪವೂ ಈಗ ಮೋದಿ ಸರ್ಕಾರ ಮುಂದಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ವಾಸ್ತವದಲ್ಲಿ ಸುಪ್ರೀಂನ ಐದು ನ್ಯಾಯಾಧೀಶರ ಪೀಠ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯದ ಬಗ್ಗೆ, ಏಳು ನ್ಯಾಯಾಧೀಶರ ಪೀಠ ರಚಿಸಲು ಸಲಹೆ ಮಾಡಿದ್ದು 2020ರ ಆಗಸ್ಟ್ 20 ರಂದು. ಅದು ಸಹ ದವಿಂದರ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್ ಪ್ರಕರಣದಲ್ಲಿ. ಹಾಗಿದ್ದರೂ ಕೂಡ ಕಳೆದ ಎರಡು ವರ್ಷಗಳಲ್ಲಿ ಒಳಮೀಸಲಾತಿ ವಿಷಯವು ಸಬ್ ಜುಡೀಸ್ ಆಗಿದೆ ಎಂದು ಒಮ್ಮೆಯೂ ಹೇಳದೆ ಕರ್ನಾಟಕದ ಬಿಜೆಪಿ , ಸಂಘಪರಿವಾರ ಮತ್ತು ಕೇಂದ್ರದ ಮೋದಿ ಸರ್ಕಾರ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ಕೊಟ್ಟಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದೇ ಪ್ರಶ್ನೆಯನ್ನು ಹೊರಟಗಾರರು ಕೇಳಿದಾಗ ಸಂವಿಧಾನ ತಿದ್ದುಪಡಿಯನ್ನು ಮಾಡದೆ, ಸುಪ್ರೀಂ ಕೋರ್ಟಿಗೂ ಹೋಗದೆ ಹೇಗೋ ಒಳಮೀಸಲಾತಿ ಕೊಟ್ಟೆ ತೀರುವುದಾಗಿ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರು ಸಮುದಾಯಕ್ಕೆ ಮೋಸ ಮಾಡಿದ್ದೇಕೆ? ಇದಕ್ಕೆ ಸಂಘಪರಿವಾರ ಉತ್ತರಿಸುತ್ತದೆಯೇ? ಉತ್ತರಿಸುವಂತೆ ಸಮುದಾಯ ಪಟ್ಟುಹಿಡಿದು ಕೇಳುತ್ತದೆಯೇ? ಅಥವಾ 2024ರ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಣ್ಣದ ಮಾತಾಡಿ ಸಮುದಾಯವನ್ನು ಮೋಸಗೊಳಿಸುವ ಪ್ರಯತ್ನಗಳನ್ನು ಮಾಡುತ್ತದೆಯೇ? ಎಂದು ಶಿವಸುಂದರ್ ಕೇಳಿದ್ದಾರೆ.

ದೇಶಮಟ್ಟದಲ್ಲಿ ಒಳಮೀಸಲಾತಿಗೆ ದೊಡ್ಡ ಹೋರಾಟ ಕಟ್ಟದೆ, ಬಿಜೆಪಿಯನ್ನೂ, ಸಂಘಪರಿವಾರವನ್ನೋ, ಇತರ ಪಕ್ಷಗಳನ್ನೂ ನಂಬಿ ಕೂತರೆ ಒಳಮೀಸಲಾತಿ ಕನ್ನಡಿಯೊಳಗಿನ ಗಂಟಾಗಿಯೇ ಉಳಿಯುವುದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...