Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...