Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...