Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...