Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...