Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...