Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...