Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...