Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

ಫ್ಯಾಕ್ಟ್‌ಚೆಕ್‌‌: ರಾಷ್ಟ್ರಪತಿ ಭವನದ ’ಮೊಘಲ್ ಉದ್ಯಾನ’ದ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿತೆ?

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಇರುವ ಭವನದ ಆತ್ಮದಂತಿರುವ ಉದ್ಯಾನವನವಾಗಿದೆ ’ಮೊಘಲ್ ಗಾರ್ಡನ್’. ಈ ಉದ್ಯಾನವು ಜಮ್ಮು ಕಾಶ್ಮೀರದ ಮೊಘಲ್ ಉದ್ಯಾನಗಳು, ತಾಜ್ ಮಹಲ್ ಸುತ್ತಮುತ್ತಲಿನ ಉದ್ಯಾನಗಳು ಮತ್ತು ಭಾರತ ಮತ್ತು ಪರ್ಷಿಯಾದ ಚಿಕಣಿ ವರ್ಣಚಿತ್ರಗಳಿಂದ ಸ್ಫೂರ್ತಿ ಪಡೆದವು ಆಗಿದೆ. ಸರ್ ಎಡ್ವಿನ್ ಲುಟಿಯನ್ಸ್ 1917 ರಲ್ಲಿ ಮೊಘಲ್ ಉದ್ಯಾನಗಳ ವಿನ್ಯಾಸವನ್ನು ಅಂತಿಮಗೊಳಿಸಿದ್ದರು.

ಇದು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ದೆಹಲಿಯ ಆಕರ್ಷಣೆಯ ಕೇಂದ್ರವಾಗಿದೆ. ಇದು ಸುಂದರವಾದ ಹೂವುಗಳು, ಅಪರೂಪದ ಜಾತಿಯ ಸಸ್ಯಗಳು ಮತ್ತು ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: ಈ ಚ್ರಿತ್ರಗಳು ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ್ದೆ?

ಆಗಸ್ಟ್ 18 ರಂದು ಅನುರಾಗ್ ಶ್ರೀವಾಸ್ತವ ಎಂಬ ಟ್ವಿಟ್ಟರ್‌ ಬಳಕೆದಾರ “ಬಿಗ್ಗ್ ವಾವ್, ರಾಷ್ಟ್ರಪತಿ ಭವನದೊಳಗಿನ ಮೊಘಲ್ ಉದ್ಯಾನದ ಹೆಸರನ್ನು ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಬದಲಾಯಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದರು. ಇದು ಇದುವರೆಗೂ 5,300 ಲೈಕ್ಸ್‌ ಪಡೆದಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ. ಅದರ ಆರ್ಕೈವ್‌ ಇಲ್ಲಿದೆ.

ಅದೇ ದಿನ ಸ್ಮಿತಾ ದೇಶ್ಮುಖ್ ಎಂಬ ಇನ್ನೊಬ್ಬ ಬಳಕೆದಾರರು ಕೂಡಾ ಇದೇ ತರದ ಸುದ್ದಿಯನ್ನು ಟ್ವಿಟ್ಟರ್‌‌ನಲ್ಲಿ ಹಂಚಿದ್ದರು, “ಕರೋನಾ ಅವಧಿಯ ಅತ್ಯುತ್ತಮ ಸುದ್ದಿ – ರಾಷ್ಟ್ರಪತಿ ಭವನದಲ್ಲಿ ಮೊಘಲ್ ಉದ್ಯಾನವನ್ನು ಈಗ ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಅದರ ಆರ್ಕೈವ್‌ ಇಲ್ಲಿದೆ.

ಸ್ಮಿತಾ ದೇಶ್ಮುಖ್ ಅವರ ಈ ಟ್ವೀಟ್ 14,400 ಲೈಕ್ ಪಡೆದಿದ್ದರೆ ಮತ್ತು 2,700 ಬಾರಿ ರಿಟ್ವೀಟ್ ಮಾಡಲಾಗಿದೆ. ಸ್ಮಿತಾ ಅವರ ಟ್ವಿಟರ್ ಬಯೋ ಪ್ರಕಾರ, ಅವರು ಪತ್ರಕರ್ತೆಯಾಗಿದ್ದಾರೆ ಮತ್ತು ಈಗ ಸಂವಹನ ತಜ್ಞರಾಗಿದ್ದಾರೆ.

ಆಗಸ್ಟ್ 19 ರಂದು ಇನ್ನೊಬ್ಬ ಬಳಕೆದಾರರು ಟ್ವೀಟ್ ಮಾಡಿ, “ರಾಷ್ಟ್ರಪತಿ ಭವನದಲ್ಲಿ ಈ ಉದ್ಯಾನವು ಇನ್ನು ಮುಂದೆ ಮೊಘಲ್ ಉದ್ಯಾನವಲ್ಲ… ಡಾ. ರಾಜೇಂದ್ರ ಪ್ರಸಾದ್ ಗಾರ್ಡನ್‌ಗೆ ಸುಸ್ವಾಗತ… ನಮ್ಮ ಮೊದಲನೇ ರಾಷ್ಟ್ರಪತಿಗೆ ಸಮರ್ಪಿಸಲಾಗಿದೆ. ಮಾಡದೇ ಇರುವುದಕ್ಕಿಂತ ನಿಧಾನವಾದರೂ ಒಳ್ಳೆಯದು” ಎಂದು ಬರೆದಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಈ ಟ್ವೀಟ್‌ಗೆ 540 ಲೈಕ್‌ಗಳು ಬಂದಿದ್ದು, 139 ಬಾರಿ ರಿಟ್ವೀಟ್ ಮಾಡಲಾಗಿದೆ.

 ಫ್ಯಾಕ್ಟ್‌‌ಚೆಕ್

ರಾಷ್ಟ್ರಪತಿ ಭವನದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಉದ್ಯಾನದ ಹೆಸರು ಇನ್ನೂ ಮೊಘಲ್ ಉದ್ಯಾನ ಎಂದೇ ಇದೆ. ಆದ್ದರಿಂದ ಇಲ್ಲಿಗೆ ಈ ಸುದ್ದಿ ತಪ್ಪು ಎನ್ನಬಹುದಾಗಿದೆ.

ಮೊಘಲ್ ಗಾರ್ಡನ್‌ ಎಂದು ಇರುವ ಇದರ ಹೆಸರನ್ನು ಬದಲಾಯಿಸಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಉದ್ಯನ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಮಹಾಸಭಾ ಒತ್ತಾಯಿಸುತ್ತಿದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಿಲ್ಲ ಎಂದು ಆಗಸ್ಟ್ 21 ರಂದು ಭಾರತ ಸರ್ಕಾರದ ಮಾಹಿತಿ ವಿಭಾಗ, ಪ್ರೆಸ್‌ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿ  ಟ್ವೀಟ್ ಮಾಡಿತ್ತು. ಅದರ ಆರ್ಕೈವ್ ಇಲ್ಲಿದೆ.

ಆಗಸ್ಟ್ 21 ರಂದು ಆಲ್‌ ಇಂಡಿಯಾ ರೇಡಿಯೋ ಸುದ್ದಿ ಟ್ವೀಟ್ ಮಾಡಿತ್ತು. “ಫೇಕ್ ನ್ಯೂಸ್ ಅಲರ್ಟ್, ರಾಷ್ಟ್ರಪತಿ ಭವನದಲ್ಲಿ ಮೊಘಲ್ ಗಾರ್ಡನ್ಸ್ ಹೆಸರನ್ನು ಬದಲಾಯಿಸಲಾಗುವುದು ಎಂದು ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೇಳಲಾಗುತ್ತಿದೆ. ಸರ್ಕಾರ ಈ ಸುದ್ದಿಯನ್ನು ನಿರಾಕರಿಸುತ್ತದೆ; ಮೊಘಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ” ಎಂದು ಹೇಳಿದೆ. ಇದರ ಆರ್ಕೈವ್ ಇಲ್ಲಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಈ ಸುದ್ದಿ ಸುಳ್ಳು ಎಂದು ಸಾಬೀತಾಗಿದೆ.


ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...