Homeಮುಖಪುಟಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧೀರ್‌ ರಂಜನ್ ಚೌಧರಿ ಬೇಡಿಕೆ ಇಟ್ಟಿದ್ದರು

- Advertisement -
- Advertisement -

ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಚಳಿಗಾಳದ ಅಧಿವೇಶನ ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಕೂಡಾ ಒಲವು ತೋರಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ತಂದಿದೆ ಎಂದು ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ಮುಂದುವರೆಸಿರುವ ಹಿನ್ನಲೆಯಲ್ಲಿ, ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧೀರ್‌ ರಂಜನ್ ಚೌಧರಿ ಬೇಡಿಕೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಸಿರುವ ಪ್ರಲ್ಹಾದ್ ಜೋಶಿ ಅಧಿವೇಶನ ಇಲ್ಲ ಎಂದು ದೃಡಪಡಿಸಿದ್ದಾರೆ.

ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ಅಧೀರ್‌ ರಂಜನ್ ಅವರ ಬೇಡಿಕೆಗೆ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಶಿ, “ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ. ಕೊರೊನಾ ಕಾರಣಕ್ಕೆ ಅಧಿವೇಶನವನ್ನು ಕರೆಯದಿರಲು ಎಲ್ಲರೂ ಒಮ್ಮತ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆದ ಮಾನ್ಸೂನ್ ಅಧಿವೇಶನವು ಕೊರೊನಾ ಕಾರಣ್ಕಕೆ ತುಂಬಾ ವಿಳಂಬವಾದರೂ ನಿರಂತರ 10 ಸಭೆಗಳಲ್ಲಿ 27 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಅವುಗಳಲ್ಲಿ ಮೂರು ಕೃಷಿ ಕಾನೂನುಗಳು ಪ್ರಸ್ತುತ ರೈತ ಪ್ರತಿಭಟನೆಗೆ ನಾಂದಿ ಹಾಡಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

“ಪ್ರಸ್ತುತ, ನಾವು ಡಿಸೆಂಬರ್ ಮಧ್ಯದಲ್ಲಿದ್ದು, ಶೀಘ್ರದಲ್ಲೇ ಕೊರೊನಾ ಲಸಿಕೆಯನ್ನು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ, ನಾನು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಅನೌಪಚಾರಿಕವಾಗಿ ಸಂಪರ್ಕಿಸಿದ್ದೇನೆ. ಅವರು ಸಾಂಕ್ರಾಮಿಕ ರೋಗದ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿ ಚಳಿಗಾಲದ ಅಧಿವೇಶನದಿಂದ ದೂರವಿರಲು ನಿರ್ಧರಿಸಿದ್ದಾರೆ. ಸಂಸತ್ತಿನ ಮುಂದಿನ ಅಧಿವೇಶನವನ್ನು ಶೀಘ್ರವಾಗಿ ನಡೆಸಲು ಸರ್ಕಾರ ಸಿದ್ಧವಾಗಿದೆ” ಎಂದು ಅವರು ಅಧೀರ್‌ ರಂಜನ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಸಂವಿಧಾನವು ಪತ್ರಿ ಆರು ತಿಂಗಳಿಗೆ ಸಂಸತ್ತು ಸಭೆ ಸೇರಬೇಕು ಎಂದು ಹೇಳುತ್ತದೆ. ಫೆಬ್ರವರಿ 1 ರಂದು ಬಜೆಟ್ ಘೋಷಣೆಗೂ ಮುಂಚಿತವಾಗಿ ಜನವರಿ ಕೊನೆಯ ವಾರದಲ್ಲಿ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.  ಸೆಪ್ಟೆಂಬರ್‌ನಲ್ಲಿ ಅನೇಕ ಸಂಸದರು ಕರೊನಾ ಸೋಂಕಿಗೆ ಒಳಗಾದ್ದರಿಂದ ಮಾನ್ಸೂನ್ ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು. ಅಧಿವೇಶನ ಪ್ರಾರಂಭವಾಗುವ ಮೊದಲು ನಡೆಸಿದ ಪರೀಕ್ಷೆಗಳಲ್ಲಿ ಲೋಕಸಭೆಯ ಹದಿನೇಳು ಸದಸ್ಯರು ಮತ್ತು ರಾಜ್ಯಸಭೆಯ ಎಂಟು ಮಂದಿ ಕೊರೊನಾ ಪಾಸಿಟಿವ್ ಆಗಿದ್ದರು.

ಇದನ್ನೂ ಓದಿ: ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...