Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...