Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...