Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...