Homeಅಂತರಾಷ್ಟ್ರೀಯಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ಗೌಪ್ಯತೆ ಕಾಳಜಿಯಿಂದಾಗಿ ಅನುಮೋದನೆಗಳು ಬಾಕಿ ಉಳಿದಿರುವ ಕಂಪನಿಗಳ ಹೆಸರನ್ನು ನೀಡಲು ಮೂಲಗಳು ನಿರಾಕರಿಸಿವೆ.

- Advertisement -
- Advertisement -

ಹೊಸ ಸ್ಕ್ರೀನಿಂಗ್ ನೀತಿಯಡಿಯಲ್ಲಿ ಚೀನಾದ ಕಂಪನಿಗಳನ್ನು ಒಳಗೊಂಡ ಸುಮಾರು 50 ಹೂಡಿಕೆ ಪ್ರಸ್ತಾಪಗಳನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಏಪ್ರಿಲ್‌ನಲ್ಲಿ ಸರ್ಕಾರ ಘೋಷಿಸಿದ ಹೊಸ ನಿಯಮಗಳ ಪ್ರಕಾರ, ನೆರೆಯ ರಾಷ್ಟ್ರಗಳನ್ನು ಆಧರಿಸಿದ ಘಟಕಗಳ ಹೊಸ ಹಾಗೂ ಹೆಚ್ಚುವರಿ ಹೂಡಿಕೆಗಳನ್ನು ಭಾರತ ಸರ್ಕಾರವೂ ಅನುಮೋದಿಸಬೇಕಾಗಿದೆ.

“ವಿವಿಧ ಅನುಮತಿಗಳ ಅಗತ್ಯವಿದೆ. ಯಾರೂ ಊಹಿಸದಷ್ಟು ನಾವು ಜಾಗರೂಕರಾಗಿರುತ್ತೇವೆ” ಎಂದು ನವದೆಹಲಿಯ ಹಿರಿಯ ಭಾರತೀಯ ಸರ್ಕಾರಿ ಅಧಿಕಾರಿಯೊಬ್ಬರು ಗಡಿ ಘರ್ಷಣೆಯ ನಂತರ ಹೂಡಿಕೆ ಅರ್ಜಿಗಳ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಕೇಳಿದಾಗ ಹೇಳಿದ್ದಾರೆ.

ಗೌಪ್ಯತೆ ಕಾಳಜಿಯಿಂದಾಗಿ ಅನುಮೋದನೆಗಳು ಬಾಕಿ ಉಳಿದಿರುವ ಕಂಪನಿಗಳ ಹೆಸರನ್ನು ನೀಡಲು ಮೂಲಗಳು ನಿರಾಕರಿಸಿವೆ.

ನಿಯಮ ಬದಲಾವಣೆಯ ನಂತರ ಚೀನಾದ ಹೂಡಿಕೆದಾರರ ಧನಸಹಾಯವನ್ನು ಒಳಗೊಂಡ ಸುಮಾರು 40-50 ಅರ್ಜಿಗಳನ್ನು ಸಲ್ಲಿಸಲಾಗಿದೆ ಹಾಗೂ ಪ್ರಸ್ತುತ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಚೀನಾದ ಭಾರತೀಯ ದೂತಾವಾಸಗಳು ಸೇರಿದಂತೆ ಅನೇಕ ಭಾರತೀಯ ಸರ್ಕಾರಿ ಸಂಸ್ಥೆಗಳು ಪ್ರಸ್ತಾವನೆಗಳ ಬಗ್ಗೆ ಸ್ಪಷ್ಟನೆ ಪಡೆಯಲು ಹೂಡಿಕೆದಾರರು ಮತ್ತು ಅವರ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ ಹೂಡಿಕೆ ಮಾಡಲು ಇತ್ತೀಚಿನ ವಾರಗಳಲ್ಲಿ ಕನಿಷ್ಠ 10 ಚೀನೀ ಗ್ರಾಹಕರು ತಮ್ಮ ಸಲಹೆಯನ್ನು ಕೋರಿದ್ದಾರೆ, ಆದರೆ ಭಾರತದಲ್ಲಿನ ನೀತಿ ದೃಷ್ಟಿಕೋನದ ಬಗ್ಗೆ ಹೆಚ್ಚಿನ ಸ್ಪಷ್ಟತೆಗಾಗಿ ಕಾಯುತ್ತಿದ್ದಾರೆ ಎಂದು ಭಾರತೀಯ ಕಾನೂನು ಸಂಸ್ಥೆಯ ಕೃಷ್ಣಮೂರ್ತಿ & ಕೋ ಪಾಲುದಾರರಾದ ಅಲೋಕ್ ಸೋಂಕರ್ ಹೇಳಿದ್ದಾರೆ.

ಕಳೆದ ವಾರ ಭಾರತವು ಟಿಕ್‌ಟಾಕ್‌ ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು  ನಿಷೇಧಿಸಿತ್ತು.


ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...