Homeಮುಖಪುಟಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ: ಟ್ವಿಟರ್‌ನಲ್ಲಿ ಟ್ರೆಂಡ್‌

ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ: ಟ್ವಿಟರ್‌ನಲ್ಲಿ ಟ್ರೆಂಡ್‌

#ModiGovtLied ಎಂಬ ಹ್ಯಾಷ್ ಟ್ಯಾಗ್‌ನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಟ್ವೀಟ್ ಮಾಡಿದ್ದಾರೆ

- Advertisement -
- Advertisement -

“ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಸುಳ್ಳು ಹೇಳಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಆರೋಪಿಸಿದ್ದು, #ModiGovtLied ಎಂಬ ಹ್ಯಾಷ್ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಮತ್ತು ಉತ್ತರದ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡಲು ಕೃಷಿ ತ್ಯಾಜ್ಯ ಸುಡುವಿಕೆ ಪ್ರಮುಖ ಕಾರಣವಲ್ಲ ಎಂದಿರುವ ಕೇಂದ್ರ ಸರ್ಕಾರ, ಒಟ್ಟು ವಾಯು ಮಾಲಿನ್ಯದಲ್ಲಿ ಶೇಕಡಾ 10ರಷ್ಟು ಮಾಲಿನ್ಯ ಮಾತ್ರ ಕೃಷಿ ತ್ಯಾಜ್ಯ ಸುಡುವುದರಿಂದ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಅಪ್ಪಟ ಸುಳ್ಳಿನ ಸಂಗತಿ ಎಂದು ಜನರು ವಾದಿಸಿದ್ದಾರೆ.

ಮಾಲಿನ್ಯವನ್ನು ತಗ್ಗಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೂರು ಕ್ರಮಗಳನ್ನು ತಿಳಿಸಿದೆ. ಅವುಗಳೆಂದರೆ: ಬೆಸ-ಸಮ ವಾಹನ ಯೋಜನೆ, ದೆಹಲಿಯಲ್ಲಿ ಟ್ರಕ್‌ಗಳ ಪ್ರವೇಶವನ್ನು ನಿಷೇಧಿಸುವುದು ಮತ್ತು ಕಠಿಣವಾದ ಲಾಕ್‌ಡೌನ್ ಜಾರಿ.

ವಾಯು ಮಾಲಿನ್ಯಕ್ಕೆ ಸಾರಿಗೆ, ಕೈಗಾರಿಕೆಗಳು, ವಾಹನ ದಟ್ಟಣೆಯನ್ನು ಹೊರತುಪಡಿಸಿ ಕೆಲವು ಪ್ರದೇಶಗಳಲ್ಲಿ ಹುಲ್ಲು ಸುಡುತ್ತಿರುವುದು ಕಾರಣ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ವಾಯುಮಾಲಿನ್ಯವನ್ನು ತಡೆಯಲು ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವುದು, ಅನಿವಾರ್ಯವಲ್ಲದ ಸಾರಿಗೆ, ವಿದ್ಯುತ್ ಸ್ಥಾವರಗಳಿಗೆ ಕಡಿವಾಣ ಹಾಕುವುದು ಮತ್ತು ವರ್ಕ್‌ ಫ್ರಂ ಹೋಮ್‌ ಸೇರಿದಂತೆ ಹಲವು ವಿಷಯಗಳ ಕುರಿತು ತುರ್ತು ಸಭೆಯನ್ನು ಕರೆಯುವಂತೆ ನ್ಯಾಯಾಲಯವು ಕೇಂದ್ರಕ್ಕೆ ಸೂಚಿಸಿದೆ. ಈ ಕುರಿತು ಮಂಗಳವಾರ (ಇಂದು) ನಿರ್ಧಾರವಾಗಲಿದೆ.

ವಾಯು ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ ಎಂದು ಜನರು ಆರೋಪಿದ್ದು, ಟ್ವಿಟ್ಟರ್‌ನಲ್ಲಿ #ModiGovtLied ಟ್ರೆಂಡ್ ಆಗಿದೆ. ಹುಲ್ಲು ಸುಡುವುದರಿಂದಾಗಿ ಆಗುತ್ತಿರುವ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಆಗಿರುವ ವರದಿಯ ತುಣುಕುಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಈ ಹಿಂದೆ ಪ್ರತಿಪಾದಿಸಿರುವ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

 

“ಮಾಲಿನ್ಯವನ್ನು ಕಡಿಮೆ ಮಾಡಲು ನಾಗರಿಕರಾದ ನಾವು ಯಾವ ಪರಿಹಾರಗಳನ್ನು ಕಂಡುಕೊಳ್ಳಬಹುದು? ಅದು ಬಿಜೆಪಿಯಾಗಿರಲಿ, ಬೇರೆ ಪಕ್ಷವಾಗಲಿ ಅವರು ಎಂದಿಗೂ ಯಾವುದೇ ಪರಿಹಾರವನ್ನು ತಿಳಿಸುವುದಿಲ್ಲ. ಅವರು ಕೇವಲ ಆಪಾದನೆಯನ್ನು ಮಾಡುತ್ತಾರೆ. ಅದಕ್ಕಾಗಿಯೇ ಭಾರತ ಎಂದಿಗೂ ಅಭಿವೃದ್ಧಿ ಹೊಂದುವುದಿಲ್ಲ” ಎಂದು ಮನ್ಮಿತ ಎಂಬವರು ಟ್ವೀಟ್ ಮಾಡಿದ್ದಾರೆ.

#ModiGovtLied ಹ್ಯಾಷ್‌ ಟ್ಯಾಗ್‌ ಮಂಗಳವಾರ ಬೆಳಿಗ್ಗೆ 8.50ರ ವೇಳೆಗೆ ಗಮನ ಸೆಳೆದಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿರಿ: ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...