Homeಮುಖಪುಟಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ: ಟ್ವಿಟರ್‌ನಲ್ಲಿ ಟ್ರೆಂಡ್‌

ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ: ಟ್ವಿಟರ್‌ನಲ್ಲಿ ಟ್ರೆಂಡ್‌

#ModiGovtLied ಎಂಬ ಹ್ಯಾಷ್ ಟ್ಯಾಗ್‌ನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಟ್ವೀಟ್ ಮಾಡಿದ್ದಾರೆ

- Advertisement -
- Advertisement -

“ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಸುಳ್ಳು ಹೇಳಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಆರೋಪಿಸಿದ್ದು, #ModiGovtLied ಎಂಬ ಹ್ಯಾಷ್ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಮತ್ತು ಉತ್ತರದ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡಲು ಕೃಷಿ ತ್ಯಾಜ್ಯ ಸುಡುವಿಕೆ ಪ್ರಮುಖ ಕಾರಣವಲ್ಲ ಎಂದಿರುವ ಕೇಂದ್ರ ಸರ್ಕಾರ, ಒಟ್ಟು ವಾಯು ಮಾಲಿನ್ಯದಲ್ಲಿ ಶೇಕಡಾ 10ರಷ್ಟು ಮಾಲಿನ್ಯ ಮಾತ್ರ ಕೃಷಿ ತ್ಯಾಜ್ಯ ಸುಡುವುದರಿಂದ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಅಪ್ಪಟ ಸುಳ್ಳಿನ ಸಂಗತಿ ಎಂದು ಜನರು ವಾದಿಸಿದ್ದಾರೆ.

ಮಾಲಿನ್ಯವನ್ನು ತಗ್ಗಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೂರು ಕ್ರಮಗಳನ್ನು ತಿಳಿಸಿದೆ. ಅವುಗಳೆಂದರೆ: ಬೆಸ-ಸಮ ವಾಹನ ಯೋಜನೆ, ದೆಹಲಿಯಲ್ಲಿ ಟ್ರಕ್‌ಗಳ ಪ್ರವೇಶವನ್ನು ನಿಷೇಧಿಸುವುದು ಮತ್ತು ಕಠಿಣವಾದ ಲಾಕ್‌ಡೌನ್ ಜಾರಿ.

ವಾಯು ಮಾಲಿನ್ಯಕ್ಕೆ ಸಾರಿಗೆ, ಕೈಗಾರಿಕೆಗಳು, ವಾಹನ ದಟ್ಟಣೆಯನ್ನು ಹೊರತುಪಡಿಸಿ ಕೆಲವು ಪ್ರದೇಶಗಳಲ್ಲಿ ಹುಲ್ಲು ಸುಡುತ್ತಿರುವುದು ಕಾರಣ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ವಾಯುಮಾಲಿನ್ಯವನ್ನು ತಡೆಯಲು ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವುದು, ಅನಿವಾರ್ಯವಲ್ಲದ ಸಾರಿಗೆ, ವಿದ್ಯುತ್ ಸ್ಥಾವರಗಳಿಗೆ ಕಡಿವಾಣ ಹಾಕುವುದು ಮತ್ತು ವರ್ಕ್‌ ಫ್ರಂ ಹೋಮ್‌ ಸೇರಿದಂತೆ ಹಲವು ವಿಷಯಗಳ ಕುರಿತು ತುರ್ತು ಸಭೆಯನ್ನು ಕರೆಯುವಂತೆ ನ್ಯಾಯಾಲಯವು ಕೇಂದ್ರಕ್ಕೆ ಸೂಚಿಸಿದೆ. ಈ ಕುರಿತು ಮಂಗಳವಾರ (ಇಂದು) ನಿರ್ಧಾರವಾಗಲಿದೆ.

ವಾಯು ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ ಎಂದು ಜನರು ಆರೋಪಿದ್ದು, ಟ್ವಿಟ್ಟರ್‌ನಲ್ಲಿ #ModiGovtLied ಟ್ರೆಂಡ್ ಆಗಿದೆ. ಹುಲ್ಲು ಸುಡುವುದರಿಂದಾಗಿ ಆಗುತ್ತಿರುವ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಆಗಿರುವ ವರದಿಯ ತುಣುಕುಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಈ ಹಿಂದೆ ಪ್ರತಿಪಾದಿಸಿರುವ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

 

“ಮಾಲಿನ್ಯವನ್ನು ಕಡಿಮೆ ಮಾಡಲು ನಾಗರಿಕರಾದ ನಾವು ಯಾವ ಪರಿಹಾರಗಳನ್ನು ಕಂಡುಕೊಳ್ಳಬಹುದು? ಅದು ಬಿಜೆಪಿಯಾಗಿರಲಿ, ಬೇರೆ ಪಕ್ಷವಾಗಲಿ ಅವರು ಎಂದಿಗೂ ಯಾವುದೇ ಪರಿಹಾರವನ್ನು ತಿಳಿಸುವುದಿಲ್ಲ. ಅವರು ಕೇವಲ ಆಪಾದನೆಯನ್ನು ಮಾಡುತ್ತಾರೆ. ಅದಕ್ಕಾಗಿಯೇ ಭಾರತ ಎಂದಿಗೂ ಅಭಿವೃದ್ಧಿ ಹೊಂದುವುದಿಲ್ಲ” ಎಂದು ಮನ್ಮಿತ ಎಂಬವರು ಟ್ವೀಟ್ ಮಾಡಿದ್ದಾರೆ.

#ModiGovtLied ಹ್ಯಾಷ್‌ ಟ್ಯಾಗ್‌ ಮಂಗಳವಾರ ಬೆಳಿಗ್ಗೆ 8.50ರ ವೇಳೆಗೆ ಗಮನ ಸೆಳೆದಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿರಿ: ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...