Homeಮುಖಪುಟಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಭಾರತೀಯ ರೈಲ್ವೆಯ ಏಳು ಕೋಚ್ ಕಾರ್ಖಾನೆಗಳನ್ನು ಒಂದೇ ಕಂಪನಿಯಾಗಿ ವಿಲೀನಗೊಳಿಸಲಾಗಿದೆ. ಇದು ಒಮ್ಮೆಗೆ ಷೇರುಗಳನ್ನು ಮಾರಲು ಅನುಕೂಲವಾಗಲಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ರೈಲ್ವೆ ಮಂಡಳಿಯ 7 ಕೋಚ್ ಕಾರ್ಖಾನೆಗಳನ್ನು ಒಂದೇ ಘಟಕಕ್ಕೆ ವಿಲೀನಗೊಳಿಸಿರುವ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆಯನ್ನು ಒಟ್ಟಾರೆಯಾಗಿ ಖಾಸಗಿ ಕೈಗೆ ಹಸ್ತಾಂತರಿಸುವ ಸಿದ್ಧತೆಗಳನ್ನು ಚುರುಕುಗೊಳಿಸಿದೆ.

ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಅವರ ಹುದ್ದೆಯನ್ನು ಸ್ಥಳಾಂತರಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಕ ಮಾಡಲಾಗಿದೆ. ಮಂಡಳಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ರದ್ದುಪಡಿಸಲಾಗಿರುವ ಹುದ್ದೆಗಳು ಎಂಜಿನಿಯರಿಂಗ್ ಮತ್ತು ಸಾಮಗ್ರಿಗಳ ನಿರ್ವಹಣೆಯನ್ನು ನಿರ್ವಹಿಸುವ ಇಲಾಖೆಗಳಿಗೆ ಸಂಬಂಧಿಸಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಕಾರ್ಪೊರೇಟ್ ಪ್ರತಿನಿಧಿಗಳು ನಿರ್ವಹಿಸುತ್ತಾರೆ.

ಇದನ್ನೂ ಓದಿ: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?; ಫ್ಯಾಕ್ಟ್‌ಚೆಕ್

ನಿಲ್ದಾಣಗಳನ್ನು ಈಗಾಗಲೇ ಖಾಸಗೀಕರಣಗೊಳಿಸಿರುವ ಕೇಂದ್ರ ಸರ್ಕಾರ, ಇದೀಗ ಕೋಚ್ ಮತ್ತು ಲೋಕೋಮೋಟಿವ್ ಕಾರ್ಖಾನೆಗಳನ್ನು ಮಾರಾಟ ಮಾಡಲು ಹಾಗೂ 151 ಖಾಸಗಿ ರೈಲುಗಳನ್ನು ಪರಿಚಯಿಸಲು ಮತ್ತು ಸರಕು ಕಾರಿಡಾರ್‌ನಲ್ಲಿ ಖಾಸಗಿ ಭಾಗವಹಿಸುವಿಕೆಯನ್ನು ತರಲು ಕಾರ್ಯವಿಧಾನಗಳನ್ನು ಪ್ರಾರಂಭಿಸಿದೆ.

ಭಾರತೀಯ ರೈಲ್ವೆಯ ಏಳು ಕೋಚ್ ಕಾರ್ಖಾನೆಗಳನ್ನು ಒಂದೇ ಕಂಪನಿಯಾಗಿ ವಿಲೀನಗೊಳಿಸಲಾಗಿದೆ. ಇದು ಒಮ್ಮೆಗೆ ಷೇರುಗಳನ್ನು ಮಾರಲು ಅನುಕೂಲವಾಗಲಿದೆ ಎನ್ನಲಾಗಿದೆ.

ಚಿತ್ರಂಜನ್ ಲೋಕೋಮೋಟಿವ್ ವರ್ಕ್ಸ್, ವಾರಣಾಸಿ ಡೀಸೆಲ್ ಲೋಕೋಮೋಟಿವ್ ವರ್ಕ್ಸ್, ಪಟಿಯಾಲ ಡೀಸೆಲ್ ಲೊಕ್ ಮೋಡೆರೇಷನ್ ವರ್ಕ್ಸ್, ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ಕಪುರ್ಥಾಲಾ ರೈಲ್‌ಕೋಚ್ ಫ್ಯಾಕ್ಟರಿ, ಬೆಂಗಳೂರು ವ್ಹೀಲ್ ಮತ್ತು ಆಕ್ಸಿಲ್ ಫ್ಯಾಕ್ಟರಿ ಮತ್ತು ರಾಯ್ ಬರೇಲಿ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಗಳನ್ನು ಒಂದೇ ಕಂಪನಿಯೊಂದಿಗೆ ವಿಲೀನಗೊಳಿಸಲಾಗುವುದು. ವಿವಿಧ ಸ್ಥಳಗಳಲ್ಲಿನ ರೈಲ್ವೆ ಜಮೀನುಗಳನ್ನು ದೀರ್ಘಾವಧಿಯ ಗುತ್ತಿಗೆಗೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ಸುಮಾರು 3 ಲಕ್ಷ ಹುದ್ದೆಗಳನ್ನು ರದ್ದುಗೊಳಿಸಿ ನೌಕರರ ಸಂಖ್ಯೆಯಲ್ಲಿ ಬೃಹತ್ ಕಡಿತ ಮಾಡಲಾಗುತ್ತದೆ. ಮುಂದಿನ ನೇಮಕಾತಿಗಳನ್ನು ನಿಷೇಧಿಸುವ ಸಾರ್ವಜನಿಕ ಅಧಿಸೂಚನೆ ಹೊರಡಿಸಿದ್ದು, ಅಲ್ಲಿ ಗುತ್ತಿಗೆ ಕಾರ್ಮಿಕರನ್ನು ವ್ಯಾಪಕವಾಗಿ ತೊಡಗಿಸಲಾಗುವುದು ಎನ್ನಲಾಗಿದೆ.

ಕೇಂದ್ರದ ಈ ನಡೆಗೆ ಹಲವು ಯೂನಿಯನ್‌ಗಳು ವಿರೋಧ ವ್ಯಕ್ತಪಡಿಸಿವೆ.


ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...