Homeಕರೋನಾ ತಲ್ಲಣಅನ್‌ಲಾಕ್‌ 3: ಚಿತ್ರಮಂದಿರ, ಜಿಮ್‌ ತೆರೆಯಲು ಅವಕಾಶ..

ಅನ್‌ಲಾಕ್‌ 3: ಚಿತ್ರಮಂದಿರ, ಜಿಮ್‌ ತೆರೆಯಲು ಅವಕಾಶ..

ಚಿತ್ರಮಂದಿರಗಳ ಸಂಘವು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ 25-30 ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ಕಾರ್ಯನಿರ್ವಹಿಸಲು ಅನುಮತಿಸುವಂತೆ ಶಿಫಾರಸು ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಹೊರಬರುವ ಅನ್‌ಲಾಕ್ 3 ಭಾಗವಾಗಿ ಚಿತ್ರಮಂದಿರ ಹಾಗೂ ಜಿಮ್‌ಗಳನ್ನು ಹಲವಾರು ನಿರ್ಬಂಧಗಳೊಂದಿಗೆ ಮತ್ತೆ ತೆರೆಯಲು ಅನುಮತಿಸುವ ಮನವಿಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಾಲಾ ಮತ್ತು ಕಾಲೇಜುಗಳು ಆನ್‌ಲೈನ್ ತರಗತಿಗಳೊಂದಿಗೆ ಮುಂದುವರಿಯಲಿವೆ ಎಂದು ಅದು ತಿಳಿಸಿದೆ.

ಚಿತ್ರಮಂದಿರಗಳ ಸಂಘವು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಶೇ. 25-30 ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ಕಾರ್ಯನಿರ್ವಹಿಸಲು ಅನುಮತಿಸುವಂತೆ ಶಿಫಾರಸು ಮಾಡಿದೆ. ವಿನಂತಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದೆ.

ಅನೇಕ ನಿರ್ಬಂಧಗಳೊಂದಿಗೆ ಜಿಮ್‌ಗಳು ಸಹ ತೆರೆಯಬಹುದು ಎಂದು ಮೂಲಗಳು ತಿಳಿಸಿವೆ.

ಮೆಟ್ರೊ ಕಾರ್ಯಾಚರಣೆಗೆ ಅನುಮತಿ ನೀಡುವಂತೆ ದೆಹಲಿ ಸರ್ಕಾರ ಕೇಂದ್ರವನ್ನು ಕೇಳಿಕೊಂಡಿತ್ತು, ಆದರೆ ಈ ಕುರಿತು ಕೇಂದ್ರ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.

ಮುಂದಿನ ತಿಂಗಳಲ್ಲಿ ಅನೇಕ ಹಬ್ಬಗಳು ನಡೆಯುವುದರಿಂದ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ಕೇಂದ್ರವು ಎಚ್ಚರಿಕೆಯ ನಡೆಯನ್ನು ಅನುಸರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾರತವು ದಿನಕ್ಕೆ ಸುಮಾರು 50,000 ಕೊರೊನಾ ಪ್ರಕರಣಗಳನ್ನು ವರದಿ ಮಾಡುತ್ತಿರುವುದರಿಂದ ಈ ನಿರ್ಧಾರವು ದುಬಾರಿಯಾಗಿದೆ. ದೇಶದಲ್ಲಿ ಇದುವರೆಗೆ ಒಟ್ಟು 14.35 ಲಕ್ಷ ಪ್ರಕರಣಗಳು ಮತ್ತು 32,771 ಸಾವುಗಳು ಸಂಭವಿಸಿವೆ. ಅಮೆರಿಕಾ ಮತ್ತು ಬ್ರೆಜಿಲ್ ನಂತರ ಜಾಗತಿಕವಾಗಿ ಕೊರೊನಾ ಸಾಂಕ್ರಮಿಕದಲ್ಲಿ ಭಾರತ ಮೂರನೆ ಸ್ಥಾನದಲ್ಲಿದೆ.

ಚಿತ್ರಮಂದಿರಗಳು ಮತ್ತು ಜಿಮ್‌ಗಳನ್ನು ಪುನಃ ತೆರೆಯಲು ಕೇಂದ್ರವು ಮುಂದಾಗುತ್ತಿದ್ದರು, ಇದರ ಅಂತಿಮ ತೀರ್ಮಾನವನ್ನು ರಾಜ್ಯಗಳು ತೆಗೆದುಕೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ.

ವಿಶ್ವಾದ್ಯಂತ 6 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿರುವ ಕೊರೊನಾ ವೈರಸ್ ಹರಡುವುದನ್ನು ನಿಧಾನಗೊಳಿಸಲು ಮಾರ್ಚ್ ಅಂತ್ಯದಲ್ಲಿ ಭಾರತದಾದ್ಯಂತ ಲಾಕ್‌ಡೌನ್ ಹೇರಲಾಗಿದ್ದರಿಂದ ಸಿನೆಮಾ, ಜಿಮ್‌ಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಲಾಕ್‌ಡೌನ್‌ನನ್ನು ಹಂತಹಂತವಾಗಿ ತೆರವು ಮಾಡಲಾಗುತ್ತಿದೆ. ಮಾಲ್‌ಗಳು, ಮಾರುಕಟ್ಟೆಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಗಳೊಂದಿಗೆ ಅನುಮತಿಸಲಾಗಿದೆ. ಸೀಮಿತ ವಿಮಾನಗಳು ಮತ್ತು ರೈಲು ಸೇವೆಗಳನ್ನು ಸಹ ಪುನರಾರಂಭಿಸಲಾಗಿದೆ.


ಓದಿ: ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...