Homeಕರೋನಾ ತಲ್ಲಣಅನ್‌ಲಾಕ್‌ 3: ಚಿತ್ರಮಂದಿರ, ಜಿಮ್‌ ತೆರೆಯಲು ಅವಕಾಶ..

ಅನ್‌ಲಾಕ್‌ 3: ಚಿತ್ರಮಂದಿರ, ಜಿಮ್‌ ತೆರೆಯಲು ಅವಕಾಶ..

ಚಿತ್ರಮಂದಿರಗಳ ಸಂಘವು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ 25-30 ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ಕಾರ್ಯನಿರ್ವಹಿಸಲು ಅನುಮತಿಸುವಂತೆ ಶಿಫಾರಸು ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಹೊರಬರುವ ಅನ್‌ಲಾಕ್ 3 ಭಾಗವಾಗಿ ಚಿತ್ರಮಂದಿರ ಹಾಗೂ ಜಿಮ್‌ಗಳನ್ನು ಹಲವಾರು ನಿರ್ಬಂಧಗಳೊಂದಿಗೆ ಮತ್ತೆ ತೆರೆಯಲು ಅನುಮತಿಸುವ ಮನವಿಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಾಲಾ ಮತ್ತು ಕಾಲೇಜುಗಳು ಆನ್‌ಲೈನ್ ತರಗತಿಗಳೊಂದಿಗೆ ಮುಂದುವರಿಯಲಿವೆ ಎಂದು ಅದು ತಿಳಿಸಿದೆ.

ಚಿತ್ರಮಂದಿರಗಳ ಸಂಘವು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಶೇ. 25-30 ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ಕಾರ್ಯನಿರ್ವಹಿಸಲು ಅನುಮತಿಸುವಂತೆ ಶಿಫಾರಸು ಮಾಡಿದೆ. ವಿನಂತಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದೆ.

ಅನೇಕ ನಿರ್ಬಂಧಗಳೊಂದಿಗೆ ಜಿಮ್‌ಗಳು ಸಹ ತೆರೆಯಬಹುದು ಎಂದು ಮೂಲಗಳು ತಿಳಿಸಿವೆ.

ಮೆಟ್ರೊ ಕಾರ್ಯಾಚರಣೆಗೆ ಅನುಮತಿ ನೀಡುವಂತೆ ದೆಹಲಿ ಸರ್ಕಾರ ಕೇಂದ್ರವನ್ನು ಕೇಳಿಕೊಂಡಿತ್ತು, ಆದರೆ ಈ ಕುರಿತು ಕೇಂದ್ರ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.

ಮುಂದಿನ ತಿಂಗಳಲ್ಲಿ ಅನೇಕ ಹಬ್ಬಗಳು ನಡೆಯುವುದರಿಂದ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ಕೇಂದ್ರವು ಎಚ್ಚರಿಕೆಯ ನಡೆಯನ್ನು ಅನುಸರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾರತವು ದಿನಕ್ಕೆ ಸುಮಾರು 50,000 ಕೊರೊನಾ ಪ್ರಕರಣಗಳನ್ನು ವರದಿ ಮಾಡುತ್ತಿರುವುದರಿಂದ ಈ ನಿರ್ಧಾರವು ದುಬಾರಿಯಾಗಿದೆ. ದೇಶದಲ್ಲಿ ಇದುವರೆಗೆ ಒಟ್ಟು 14.35 ಲಕ್ಷ ಪ್ರಕರಣಗಳು ಮತ್ತು 32,771 ಸಾವುಗಳು ಸಂಭವಿಸಿವೆ. ಅಮೆರಿಕಾ ಮತ್ತು ಬ್ರೆಜಿಲ್ ನಂತರ ಜಾಗತಿಕವಾಗಿ ಕೊರೊನಾ ಸಾಂಕ್ರಮಿಕದಲ್ಲಿ ಭಾರತ ಮೂರನೆ ಸ್ಥಾನದಲ್ಲಿದೆ.

ಚಿತ್ರಮಂದಿರಗಳು ಮತ್ತು ಜಿಮ್‌ಗಳನ್ನು ಪುನಃ ತೆರೆಯಲು ಕೇಂದ್ರವು ಮುಂದಾಗುತ್ತಿದ್ದರು, ಇದರ ಅಂತಿಮ ತೀರ್ಮಾನವನ್ನು ರಾಜ್ಯಗಳು ತೆಗೆದುಕೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ.

ವಿಶ್ವಾದ್ಯಂತ 6 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿರುವ ಕೊರೊನಾ ವೈರಸ್ ಹರಡುವುದನ್ನು ನಿಧಾನಗೊಳಿಸಲು ಮಾರ್ಚ್ ಅಂತ್ಯದಲ್ಲಿ ಭಾರತದಾದ್ಯಂತ ಲಾಕ್‌ಡೌನ್ ಹೇರಲಾಗಿದ್ದರಿಂದ ಸಿನೆಮಾ, ಜಿಮ್‌ಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಲಾಕ್‌ಡೌನ್‌ನನ್ನು ಹಂತಹಂತವಾಗಿ ತೆರವು ಮಾಡಲಾಗುತ್ತಿದೆ. ಮಾಲ್‌ಗಳು, ಮಾರುಕಟ್ಟೆಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಗಳೊಂದಿಗೆ ಅನುಮತಿಸಲಾಗಿದೆ. ಸೀಮಿತ ವಿಮಾನಗಳು ಮತ್ತು ರೈಲು ಸೇವೆಗಳನ್ನು ಸಹ ಪುನರಾರಂಭಿಸಲಾಗಿದೆ.


ಓದಿ: ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...