Homeಮುಖಪುಟ’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಸಚಿವ ರವಿಶಂಕರ್‌ ಪ್ರಸಾದ್ ಆರೋಪಿಸಿದ್ದಾರೆ

- Advertisement -
- Advertisement -

ಆಡಳಿತಾರೂಡ ಬಿಜೆಪಿ ಸದಸ್ಯರ ಬಗ್ಗೆ ಭಾರತದ ಫೇಸ್‌ಬುಕ್ ಕಾರ್ಯನಿರ್ವಾಹಕರು ಪಕ್ಷಪಾತ ತೋರಿದ್ದಾರೆ ಎಂಬ ವರದಿಗಳ ಬಗೆಗಿನ ಭಾರಿ ವಿವಾದದ ಮಧ್ಯೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಭಾರತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವಾಗ ಪ್ರಧಾನಿ ಮತ್ತು ಭಾರತದ ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ನಿಂದಿಸುತ್ತಿದೆ ಎಂದು ಆರೋಪಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಲಪಂಥೀಯ ಪುಟಗಳನ್ನು ಅಳಿಸಲು ಅಥವಾ ಅವುಗಳ ವ್ಯಾಪ್ತಿಯನ್ನು ಗಣನೀಯವಾಗಿ ಕಡಿಮೆ ಮಾಡಲು ಫೇಸ್‌ಬುಕ್ ಇಂಡಿಯಾದ ಒಂದು ಏಕೀಕೃತ ಪ್ರಯತ್ನ ನಡೆಸಿತ್ತು ಎಂದು ಕೇಳಲ್ಪಟ್ಟಿದ್ದೇನೆ ಎಂದು ಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಈ ಬಗ್ಗೆ ಬರೆದ ಅನೇಕ ಮೇಲ್‌ಗಳಿಗೂ ಸಹ ಉತ್ತರಿಸಲ್ಪಟ್ಟಿಲ್ಲ, ಇದು ಫೇಸ್‌ಬುಕ್ ಇಂಡಿಯಾ ತಂಡದಲ್ಲಿನ “ವ್ಯಕ್ತಿಗಳ ಪ್ರಬಲ ರಾಜಕೀಯ ನಂಬಿಕೆಗಳ” ನೇರ ಫಲಿತಾಂಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗಾಸಿಪ್, ಪಿಸುಮಾತುಗಳು ಮತ್ತು ಕೊಂಕುನುಡಿಗಳ ಮೂಲಕ ಭಾರತದ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದು ಖಂಡನೀಯ. ಅಂತರರಾಷ್ಟ್ರೀಯ ಮಾಧ್ಯಮಗಳೊಂದಿಗಿನ ಫೇಸ್‌ಬುಕ್‌ನ ಈ ಒಡನಾಟವು ನಮ್ಮ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆ ತಮ್ಮ ಆಕಾಂಕ್ಷೆಗಳನ್ನು ಬಿತ್ತಲು ದುಷ್ಕೃತ್ಯದ ಪಟ್ಟಭದ್ರ ಹಿತಾಸಕ್ತಿಗಳಿಗೆ ಮುಕ್ತತೆಯನ್ನು ನೀಡುತ್ತಿದೆ” ಎಂದು ಅವರು ಬರೆದಿದ್ದಾರೆ.

ವಾಲ್ ಸ್ಟ್ರೀಟ್‌ ಜರ್ನಲ್ ಫೇಸ್‌ಬುಕ್ ಇಂಡಿಯಾ ಬಿಜೆಪಿ ಪರವಾಗಿ ಕೆಲಸ ಮಾಡಿದೆ ಎಂದು ಪ್ರತಿಪಾದಿಸುತ್ತಿದ್ದರೆ, ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಪ್ರಸಾದ್ ಆರೋಪಿಸುತ್ತಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರಿಂದ ಹಿಡಿದು ಇತರ ಹಿರಿಯ ಅಧಿಕಾರಿಗಳವರೆಗಿನ ಫೇಸ್‌ಬುಕ್ ಇಂಡಿಯಾ ತಂಡವು “ಒಂದು ನಿರ್ದಿಷ್ಟ ರಾಜಕೀಯ ನಂಬಿಕೆಗೆ ಸೇರಿದ ಜನರ ಪ್ರಾಬಲ್ಯ ಹೊಂದಿದೆ” ಮತ್ತು “ಈ ರಾಜಕೀಯ ಪ್ರವೃತ್ತಿಯ ಜನರು ಸತತ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಲ್ಲಿ ಅಗಾಧವಾಗಿ ಸೋಲಿಸಲ್ಪಟ್ಟಿದ್ದಾರೆ” ಎಂದು “ವಿಶ್ವಾಸಾರ್ಹ ಮಾಧ್ಯಮ ವರದಿಗಳನ್ನು” ಉಲ್ಲೇಖಿಸಿ ರವಿಕಶಂಕರ್‌ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ವಾಲ್‌ಪೋಸ್ಟ್‌‌ ಜರ್ನಲ್‌ ವರದಿಗಳನ್ನು ಫೇಸ್‌ಬುಕ್‌ನೊಳಗಿನ “ಆಂತರಿಕ ಶಕ್ತಿ ಹೋರಾಟ” ಎಂದು ಸಚಿವ ಕರೆದಿದ್ದಾರೆ.

ಫೇಸ್‌ಬುಕ್‌ನ ಫ್ಯಾಕ್ಟ್‌ಚೆಕ್‌ಗಳನ್ನು ತೃತೀಯ ಫ್ಯಾಕ್ಟ್-ಚೆಕರ್‌ಗಳಿಗೆ ಹೊರಗುತ್ತಿಗೆ ನೀಡುತ್ತಿರುವುದು ಒಂದು ಸಮಸ್ಯೆಯೆಂದು ಹೇಳುತ್ತಾ, ಸಂಸ್ಥೆಯು “ಬಳಕೆದಾರರನ್ನು ತಪ್ಪು ಮಾಹಿತಿಯಿಂದ ರಕ್ಷಿಸುವ ಜವಾಬ್ದಾರಿಯನ್ನು ಸ್ವತಃ ಬಿಟ್ಟುಕೊಡುತ್ತಿದೆ ಮತ್ತು ಬದಲಿಗೆ ಇದು ವಿಶ್ವಾಸಾರ್ಹತೆಯಿಲ್ಲದ ಮೋಸದ ಸಂಸ್ಥೆಗಳಿಗೆ ಮೂಲವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಆಗಸ್ಟ್‌ನಲ್ಲಿ ಎರಡು ಬಾರಿ ಜುಕರ್‌ಬರ್ಗ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ತನ್ನ ಕಾರ್ಯಾಚರಣೆಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಯಾವ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...