Homeಮುಖಪುಟ’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಸಚಿವ ರವಿಶಂಕರ್‌ ಪ್ರಸಾದ್ ಆರೋಪಿಸಿದ್ದಾರೆ

- Advertisement -
- Advertisement -

ಆಡಳಿತಾರೂಡ ಬಿಜೆಪಿ ಸದಸ್ಯರ ಬಗ್ಗೆ ಭಾರತದ ಫೇಸ್‌ಬುಕ್ ಕಾರ್ಯನಿರ್ವಾಹಕರು ಪಕ್ಷಪಾತ ತೋರಿದ್ದಾರೆ ಎಂಬ ವರದಿಗಳ ಬಗೆಗಿನ ಭಾರಿ ವಿವಾದದ ಮಧ್ಯೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಭಾರತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವಾಗ ಪ್ರಧಾನಿ ಮತ್ತು ಭಾರತದ ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ನಿಂದಿಸುತ್ತಿದೆ ಎಂದು ಆರೋಪಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಲಪಂಥೀಯ ಪುಟಗಳನ್ನು ಅಳಿಸಲು ಅಥವಾ ಅವುಗಳ ವ್ಯಾಪ್ತಿಯನ್ನು ಗಣನೀಯವಾಗಿ ಕಡಿಮೆ ಮಾಡಲು ಫೇಸ್‌ಬುಕ್ ಇಂಡಿಯಾದ ಒಂದು ಏಕೀಕೃತ ಪ್ರಯತ್ನ ನಡೆಸಿತ್ತು ಎಂದು ಕೇಳಲ್ಪಟ್ಟಿದ್ದೇನೆ ಎಂದು ಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಈ ಬಗ್ಗೆ ಬರೆದ ಅನೇಕ ಮೇಲ್‌ಗಳಿಗೂ ಸಹ ಉತ್ತರಿಸಲ್ಪಟ್ಟಿಲ್ಲ, ಇದು ಫೇಸ್‌ಬುಕ್ ಇಂಡಿಯಾ ತಂಡದಲ್ಲಿನ “ವ್ಯಕ್ತಿಗಳ ಪ್ರಬಲ ರಾಜಕೀಯ ನಂಬಿಕೆಗಳ” ನೇರ ಫಲಿತಾಂಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗಾಸಿಪ್, ಪಿಸುಮಾತುಗಳು ಮತ್ತು ಕೊಂಕುನುಡಿಗಳ ಮೂಲಕ ಭಾರತದ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದು ಖಂಡನೀಯ. ಅಂತರರಾಷ್ಟ್ರೀಯ ಮಾಧ್ಯಮಗಳೊಂದಿಗಿನ ಫೇಸ್‌ಬುಕ್‌ನ ಈ ಒಡನಾಟವು ನಮ್ಮ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆ ತಮ್ಮ ಆಕಾಂಕ್ಷೆಗಳನ್ನು ಬಿತ್ತಲು ದುಷ್ಕೃತ್ಯದ ಪಟ್ಟಭದ್ರ ಹಿತಾಸಕ್ತಿಗಳಿಗೆ ಮುಕ್ತತೆಯನ್ನು ನೀಡುತ್ತಿದೆ” ಎಂದು ಅವರು ಬರೆದಿದ್ದಾರೆ.

ವಾಲ್ ಸ್ಟ್ರೀಟ್‌ ಜರ್ನಲ್ ಫೇಸ್‌ಬುಕ್ ಇಂಡಿಯಾ ಬಿಜೆಪಿ ಪರವಾಗಿ ಕೆಲಸ ಮಾಡಿದೆ ಎಂದು ಪ್ರತಿಪಾದಿಸುತ್ತಿದ್ದರೆ, ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಪ್ರಸಾದ್ ಆರೋಪಿಸುತ್ತಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರಿಂದ ಹಿಡಿದು ಇತರ ಹಿರಿಯ ಅಧಿಕಾರಿಗಳವರೆಗಿನ ಫೇಸ್‌ಬುಕ್ ಇಂಡಿಯಾ ತಂಡವು “ಒಂದು ನಿರ್ದಿಷ್ಟ ರಾಜಕೀಯ ನಂಬಿಕೆಗೆ ಸೇರಿದ ಜನರ ಪ್ರಾಬಲ್ಯ ಹೊಂದಿದೆ” ಮತ್ತು “ಈ ರಾಜಕೀಯ ಪ್ರವೃತ್ತಿಯ ಜನರು ಸತತ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಲ್ಲಿ ಅಗಾಧವಾಗಿ ಸೋಲಿಸಲ್ಪಟ್ಟಿದ್ದಾರೆ” ಎಂದು “ವಿಶ್ವಾಸಾರ್ಹ ಮಾಧ್ಯಮ ವರದಿಗಳನ್ನು” ಉಲ್ಲೇಖಿಸಿ ರವಿಕಶಂಕರ್‌ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ವಾಲ್‌ಪೋಸ್ಟ್‌‌ ಜರ್ನಲ್‌ ವರದಿಗಳನ್ನು ಫೇಸ್‌ಬುಕ್‌ನೊಳಗಿನ “ಆಂತರಿಕ ಶಕ್ತಿ ಹೋರಾಟ” ಎಂದು ಸಚಿವ ಕರೆದಿದ್ದಾರೆ.

ಫೇಸ್‌ಬುಕ್‌ನ ಫ್ಯಾಕ್ಟ್‌ಚೆಕ್‌ಗಳನ್ನು ತೃತೀಯ ಫ್ಯಾಕ್ಟ್-ಚೆಕರ್‌ಗಳಿಗೆ ಹೊರಗುತ್ತಿಗೆ ನೀಡುತ್ತಿರುವುದು ಒಂದು ಸಮಸ್ಯೆಯೆಂದು ಹೇಳುತ್ತಾ, ಸಂಸ್ಥೆಯು “ಬಳಕೆದಾರರನ್ನು ತಪ್ಪು ಮಾಹಿತಿಯಿಂದ ರಕ್ಷಿಸುವ ಜವಾಬ್ದಾರಿಯನ್ನು ಸ್ವತಃ ಬಿಟ್ಟುಕೊಡುತ್ತಿದೆ ಮತ್ತು ಬದಲಿಗೆ ಇದು ವಿಶ್ವಾಸಾರ್ಹತೆಯಿಲ್ಲದ ಮೋಸದ ಸಂಸ್ಥೆಗಳಿಗೆ ಮೂಲವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಆಗಸ್ಟ್‌ನಲ್ಲಿ ಎರಡು ಬಾರಿ ಜುಕರ್‌ಬರ್ಗ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ತನ್ನ ಕಾರ್ಯಾಚರಣೆಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಯಾವ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...