Homeಮುಖಪುಟ’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಸಚಿವ ರವಿಶಂಕರ್‌ ಪ್ರಸಾದ್ ಆರೋಪಿಸಿದ್ದಾರೆ

- Advertisement -
- Advertisement -

ಆಡಳಿತಾರೂಡ ಬಿಜೆಪಿ ಸದಸ್ಯರ ಬಗ್ಗೆ ಭಾರತದ ಫೇಸ್‌ಬುಕ್ ಕಾರ್ಯನಿರ್ವಾಹಕರು ಪಕ್ಷಪಾತ ತೋರಿದ್ದಾರೆ ಎಂಬ ವರದಿಗಳ ಬಗೆಗಿನ ಭಾರಿ ವಿವಾದದ ಮಧ್ಯೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಭಾರತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವಾಗ ಪ್ರಧಾನಿ ಮತ್ತು ಭಾರತದ ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ನಿಂದಿಸುತ್ತಿದೆ ಎಂದು ಆರೋಪಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಲಪಂಥೀಯ ಪುಟಗಳನ್ನು ಅಳಿಸಲು ಅಥವಾ ಅವುಗಳ ವ್ಯಾಪ್ತಿಯನ್ನು ಗಣನೀಯವಾಗಿ ಕಡಿಮೆ ಮಾಡಲು ಫೇಸ್‌ಬುಕ್ ಇಂಡಿಯಾದ ಒಂದು ಏಕೀಕೃತ ಪ್ರಯತ್ನ ನಡೆಸಿತ್ತು ಎಂದು ಕೇಳಲ್ಪಟ್ಟಿದ್ದೇನೆ ಎಂದು ಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಈ ಬಗ್ಗೆ ಬರೆದ ಅನೇಕ ಮೇಲ್‌ಗಳಿಗೂ ಸಹ ಉತ್ತರಿಸಲ್ಪಟ್ಟಿಲ್ಲ, ಇದು ಫೇಸ್‌ಬುಕ್ ಇಂಡಿಯಾ ತಂಡದಲ್ಲಿನ “ವ್ಯಕ್ತಿಗಳ ಪ್ರಬಲ ರಾಜಕೀಯ ನಂಬಿಕೆಗಳ” ನೇರ ಫಲಿತಾಂಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗಾಸಿಪ್, ಪಿಸುಮಾತುಗಳು ಮತ್ತು ಕೊಂಕುನುಡಿಗಳ ಮೂಲಕ ಭಾರತದ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದು ಖಂಡನೀಯ. ಅಂತರರಾಷ್ಟ್ರೀಯ ಮಾಧ್ಯಮಗಳೊಂದಿಗಿನ ಫೇಸ್‌ಬುಕ್‌ನ ಈ ಒಡನಾಟವು ನಮ್ಮ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆ ತಮ್ಮ ಆಕಾಂಕ್ಷೆಗಳನ್ನು ಬಿತ್ತಲು ದುಷ್ಕೃತ್ಯದ ಪಟ್ಟಭದ್ರ ಹಿತಾಸಕ್ತಿಗಳಿಗೆ ಮುಕ್ತತೆಯನ್ನು ನೀಡುತ್ತಿದೆ” ಎಂದು ಅವರು ಬರೆದಿದ್ದಾರೆ.

ವಾಲ್ ಸ್ಟ್ರೀಟ್‌ ಜರ್ನಲ್ ಫೇಸ್‌ಬುಕ್ ಇಂಡಿಯಾ ಬಿಜೆಪಿ ಪರವಾಗಿ ಕೆಲಸ ಮಾಡಿದೆ ಎಂದು ಪ್ರತಿಪಾದಿಸುತ್ತಿದ್ದರೆ, ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಪ್ರಸಾದ್ ಆರೋಪಿಸುತ್ತಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರಿಂದ ಹಿಡಿದು ಇತರ ಹಿರಿಯ ಅಧಿಕಾರಿಗಳವರೆಗಿನ ಫೇಸ್‌ಬುಕ್ ಇಂಡಿಯಾ ತಂಡವು “ಒಂದು ನಿರ್ದಿಷ್ಟ ರಾಜಕೀಯ ನಂಬಿಕೆಗೆ ಸೇರಿದ ಜನರ ಪ್ರಾಬಲ್ಯ ಹೊಂದಿದೆ” ಮತ್ತು “ಈ ರಾಜಕೀಯ ಪ್ರವೃತ್ತಿಯ ಜನರು ಸತತ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಲ್ಲಿ ಅಗಾಧವಾಗಿ ಸೋಲಿಸಲ್ಪಟ್ಟಿದ್ದಾರೆ” ಎಂದು “ವಿಶ್ವಾಸಾರ್ಹ ಮಾಧ್ಯಮ ವರದಿಗಳನ್ನು” ಉಲ್ಲೇಖಿಸಿ ರವಿಕಶಂಕರ್‌ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ವಾಲ್‌ಪೋಸ್ಟ್‌‌ ಜರ್ನಲ್‌ ವರದಿಗಳನ್ನು ಫೇಸ್‌ಬುಕ್‌ನೊಳಗಿನ “ಆಂತರಿಕ ಶಕ್ತಿ ಹೋರಾಟ” ಎಂದು ಸಚಿವ ಕರೆದಿದ್ದಾರೆ.

ಫೇಸ್‌ಬುಕ್‌ನ ಫ್ಯಾಕ್ಟ್‌ಚೆಕ್‌ಗಳನ್ನು ತೃತೀಯ ಫ್ಯಾಕ್ಟ್-ಚೆಕರ್‌ಗಳಿಗೆ ಹೊರಗುತ್ತಿಗೆ ನೀಡುತ್ತಿರುವುದು ಒಂದು ಸಮಸ್ಯೆಯೆಂದು ಹೇಳುತ್ತಾ, ಸಂಸ್ಥೆಯು “ಬಳಕೆದಾರರನ್ನು ತಪ್ಪು ಮಾಹಿತಿಯಿಂದ ರಕ್ಷಿಸುವ ಜವಾಬ್ದಾರಿಯನ್ನು ಸ್ವತಃ ಬಿಟ್ಟುಕೊಡುತ್ತಿದೆ ಮತ್ತು ಬದಲಿಗೆ ಇದು ವಿಶ್ವಾಸಾರ್ಹತೆಯಿಲ್ಲದ ಮೋಸದ ಸಂಸ್ಥೆಗಳಿಗೆ ಮೂಲವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಆಗಸ್ಟ್‌ನಲ್ಲಿ ಎರಡು ಬಾರಿ ಜುಕರ್‌ಬರ್ಗ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ತನ್ನ ಕಾರ್ಯಾಚರಣೆಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಯಾವ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...