Homeಮುಖಪುಟ'ದೆಹಲಿ ಕಾಲ್ತುಳಿತವನ್ನು ಕೇಂದ್ರ ಮುಚ್ಚಿಹಾಕಿದೆ..'; ರೈಲ್ವೆ ಸಚಿವರ ರಾಜೀನಾಮೆಗೆ ಟಿಎಂಸಿ ಒತ್ತಾಯ

‘ದೆಹಲಿ ಕಾಲ್ತುಳಿತವನ್ನು ಕೇಂದ್ರ ಮುಚ್ಚಿಹಾಕಿದೆ..’; ರೈಲ್ವೆ ಸಚಿವರ ರಾಜೀನಾಮೆಗೆ ಟಿಎಂಸಿ ಒತ್ತಾಯ

- Advertisement -
- Advertisement -

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತವನ್ನು ಮುಚ್ಚಿಹಾಕಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಭಾನುವಾರ ಆರೋಪಿಸಿದ್ದು, ‘ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ -ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಘಟನೆಯನ್ನು “ಹೃದಯವಿದ್ರಾವಕ” ಎಂದು ಕರೆದಿದ್ದಾರೆ.

ವಿಶೇಷವಾಗಿ ಮಹಾ ಕುಂಭದಂತಹ ದೊಡ್ಡ ಧಾರ್ಮಿಕ ಸಭೆಗಳ ಸಮಯದಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉತ್ತಮ ಯೋಜನೆ ಮತ್ತು ನಿರ್ವಹಣೆಯ ಅಗತ್ಯವಿದೆ ಎಂಬುದನ್ನು ಅವರು ಒತ್ತಿ ಹೇಳಿದರು.

“ದೆಹಲಿ ಕಾಲ್ತುಳಿತದಲ್ಲಿ 18 ಜೀವಗಳ ದುರಂತ ನಷ್ಟವು ತೀವ್ರ ಹೃದಯವಿದ್ರಾವಕವಾಗಿದೆ. ಈ ನೋವಿನ ಘಟನೆಯು ಎಚ್ಚರಿಕೆಯಿಂದ ಯೋಜನೆ ಹಾಗೂ ನಿರ್ವಹಣೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ವಿಶೇಷವಾಗಿ, ನಾಗರಿಕರ ಸುರಕ್ಷತೆಯ ವಿಷಯದಲ್ಲಿ” ಎಂದು ಅವರು ಹೇಳಿದರು.

“ಮಹಾ ಕುಂಭಕ್ಕೆ ಹೋಗುವ ಯಾತ್ರಿಕರಿಗೆ ಸರಿಯಾದ ಬೆಂಬಲ-ಸೌಲಭ್ಯಗಳನ್ನು ನೀಡಬೇಕಾಗಿತ್ತು. ಇಂತಹ ಪ್ರಯಾಣಗಳು ಸುರಕ್ಷಿತ ಮತ್ತು ಸುಸಂಘಟಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ” ಎಂದು ಅವರು ಹೇಳಿದರು.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಈ ಘಟನೆಯನ್ನು “ದುರದೃಷ್ಟಕರ, ಖಂಡನೀಯ ಮತ್ತು ರೈಲ್ವೆಯ ಸಂಪೂರ್ಣ ದುರುಪಯೋಗದ ಪರಿಣಾಮ” ಎಂದು ಕರೆದರು.

“ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲತೆಗೆ ಇದು ಮತ್ತೊಂದು ಉದಾಹರಣೆಯಾಗಿದೆ. ಮೀಸಲು ಬೋಗಿಗಳನ್ನು ಹೊರಗಿನವರು ಆಕ್ರಮಿಸಿಕೊಂಡಿದ್ದಾರೆ, ಅವ್ಯವಸ್ಥೆ ವ್ಯಾಪಕವಾಗಿದೆ, ಈಗ ನಮಗೆ ಈ ಭಯಾನಕ ಕಾಲ್ತುಳಿತ ಸಂಭವಿಸಿದೆ. ರೈಲ್ವೆ ಸಚಿವರು ಪ್ರಚಾರದಲ್ಲಿ ಮಾತ್ರ ಆಸಕ್ತಿ ಹೊಂದಿದ್ದಾರೆ! ಅಧಿಕಾರದಲ್ಲಿ ಮುಂದುವರಿಯಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಅರಿತುಕೊಳ್ಳುವ ಮೊದಲು ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಳ್ಳಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಟಿಎಂಸಿ ರಾಜ್ಯಸಭಾ ಉಪ ನಾಯಕಿ ಸಾಗರಿಕಾ ಘೋಷ್, “ಸರ್ಕಾರವು ಭಾರತೀಯ ನಾಗರಿಕರ ಜೀವನದ ಜೊತೆ ನಿರ್ದಯವಾಗಿ ಆಟವಾಡುತ್ತಿದೆ, ಅದನ್ನು ಶಬ್ದಗಳಿಗೆ ಮೀರಿದ ದುರಂತ” ಎಂದು ಕರೆದರು.

“ಮೊದಲು ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಯಾವುದೇ ಕಾಲ್ತುಳಿತವನ್ನು ನಿರಾಕರಿಸುತ್ತದೆ. ನಂತರ ಅವರು ಅದನ್ನು ವದಂತಿ ಎಂದು ಕರೆಯುತ್ತಾರೆ. ನಂತರ ಅವರು ‘ಕೆಲವು ಜನರು’ ‘ಗಾಯಗೊಂಡಿದ್ದಾರೆ’ ಎಂದು ಒಪ್ಪಿಕೊಳ್ಳುತ್ತಾರೆ. ನಂತರ ಬಿಜೆಪಿ ‘ಕೆಲವರು’ ಮೃತಪಟ್ಟಿರಬಹುದು ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗುತ್ತದೆ” ಎಂದು ಘೋಷ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಜುಮ್ಲಾ ಪಕ್ಷ ಮತ್ತು ಅದರ ಜುಮ್ಲಾ ಸರ್ಕಾರವು ಸಾವುಗಳು ಮತ್ತು ದುರಂತಗಳನ್ನು ಮತ್ತೆ ಮತ್ತೆ ಮುಚ್ಚಿಡುತ್ತಲೇ ಇದೆ. ಭಾರತೀಯ ನಾಗರಿಕರ ಜೀವನದ ಜೊತೆ ನಿರ್ದಯವಾಗಿ ಆಟವಾಡುತ್ತಿದೆ. ನವದೆಹಲಿಯ ನಿಲ್ದಾಣದ ಆಘಾತಕಾರಿ ಕಾಲ್ತುಳಿತದಿಂದ ಮೋದಿ ಸರ್ಕಾರದ ‘ಕನಿಷ್ಠ ಆಡಳಿತ, ಗರಿಷ್ಠ ಪ್ರಚಾರ’ ಮಂತ್ರ ಮತ್ತೆ ಬಹಿರಂಗವಾಗಿದೆ. ಇದು ಪದಗಳಿಗೆ ಮೀರಿದ ದುರಂತ” ಎಂದಿ ಅವರು ಹೇಳಿದರು.

ಇದನ್ನೂ ಓದಿ; ಗುಜರಾತ್‌| ದೇವಾಲಯ ಉತ್ಸವದಿಂದ ದಲಿತರನ್ನು ಹೊರಗಿಟ್ಟ ಪ್ರಕರಣ; ವಿವರಣೆ ಕೇಳಿದ ಎಸ್‌ಸಿ-ಎಸ್‌ಟಿ ರಾಷ್ಟ್ರೀಯ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...