Homeಮುಖಪುಟಕೇಂದ್ರಕ್ಕೆ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಲ್ಲ: ಮಮತಾ ಬ್ಯಾನರ್ಜಿ

ಕೇಂದ್ರಕ್ಕೆ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಲ್ಲ: ಮಮತಾ ಬ್ಯಾನರ್ಜಿ

ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯರನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕೋರಿದ್ದಾರೆ. ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದಿಲ್ಲ ಎಂದು ಅವರು ಪತ್ರದಲ್ಲಿ ಕೇಂದ್ರಕ್ಕೆ ತಿಳಿದ್ದಾರೆ.

ಐದು ಪುಟಗಳ ಪತ್ರಗಳನ್ನು ಬರೆದಿರುವ ಮಮತಾ ಬ್ಯಾನರ್ಜಿ ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಕೇಂದ್ರದ ಆದೇಶವನ್ನು ಏಕಪಕ್ಷೀಯ ಎಂದು ಕರೆದಿರುವ ಅವರು, “ಈ ನಿರ್ಧಾರದಿಂದ ತಾನು ಆಘಾತಕ್ಕೊಳಗಾಗಿದ್ದು, ಇದನ್ನು ರಾಜ್ಯ ಸರ್ಕಾರದೊಂದಿಗೆ ಯಾವುದೇ ಪೂರ್ವ ಸಮಾಲೋಚನೆಯಿಲ್ಲದೆ ಆದೇಶ ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಪಶ್ಚಿಮ ಬಂಗಾಳದ ಜನರಿಗಾಗಿ ನಾನು ಮನವಿ ಮಾಡುತ್ತಿದ್ದೇನೆ, ಸಾರ್ವಜನಿಕರ ಹಿತಾಸಕ್ತಿಗಾಗಿ ನಿಮ್ಮ ಆದೇಶವನ್ನು ಕೈಬಿಡಬೇಕು, ಹಿಂದೆಗೆದುಕೊಳ್ಳಬೇಕು ಮತ್ತು ಮರುಪರಿಶೀಲಿಸಬೇಕು ಎಂದು ಅವರು ತಿಳಿಸಿದ್ದು, “ಈ ನಿರ್ಣಾಯಕ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲು ಆಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಕೇಂದ್ರವು ಮೇ 28 ರ ಶುಕ್ರವಾರದಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು.

ಅದಕ್ಕೂ ಮೊದಲು ಅಲಪನ್‌ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗೆ ಮೋದಿಯನ್ನು ಭೇಟಿ ಮಾಡಿ ಯಾಸ್‌ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ಕೇಂದ್ರವು ಕರೆದಿದ್ದ ಪುನರ್‌ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೆ ಅವರನ್ನು ಕೇಂದ್ರಕ್ಕೆ ವಾಪಾಸ್ ಕಳುಹಿಸಬೇಕು ಎಂದು ಕೇಂದ್ರವು ರಾಜ್ಯವನ್ನು ಕೇಳಿಕೊಂಡಿತ್ತು.

ಈ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಕೇಂದ್ರವು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...