Homeಮುಖಪುಟಕೇಂದ್ರಕ್ಕೆ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಲ್ಲ: ಮಮತಾ ಬ್ಯಾನರ್ಜಿ

ಕೇಂದ್ರಕ್ಕೆ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಲ್ಲ: ಮಮತಾ ಬ್ಯಾನರ್ಜಿ

ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯರನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕೋರಿದ್ದಾರೆ. ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದಿಲ್ಲ ಎಂದು ಅವರು ಪತ್ರದಲ್ಲಿ ಕೇಂದ್ರಕ್ಕೆ ತಿಳಿದ್ದಾರೆ.

ಐದು ಪುಟಗಳ ಪತ್ರಗಳನ್ನು ಬರೆದಿರುವ ಮಮತಾ ಬ್ಯಾನರ್ಜಿ ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಕೇಂದ್ರದ ಆದೇಶವನ್ನು ಏಕಪಕ್ಷೀಯ ಎಂದು ಕರೆದಿರುವ ಅವರು, “ಈ ನಿರ್ಧಾರದಿಂದ ತಾನು ಆಘಾತಕ್ಕೊಳಗಾಗಿದ್ದು, ಇದನ್ನು ರಾಜ್ಯ ಸರ್ಕಾರದೊಂದಿಗೆ ಯಾವುದೇ ಪೂರ್ವ ಸಮಾಲೋಚನೆಯಿಲ್ಲದೆ ಆದೇಶ ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಪಶ್ಚಿಮ ಬಂಗಾಳದ ಜನರಿಗಾಗಿ ನಾನು ಮನವಿ ಮಾಡುತ್ತಿದ್ದೇನೆ, ಸಾರ್ವಜನಿಕರ ಹಿತಾಸಕ್ತಿಗಾಗಿ ನಿಮ್ಮ ಆದೇಶವನ್ನು ಕೈಬಿಡಬೇಕು, ಹಿಂದೆಗೆದುಕೊಳ್ಳಬೇಕು ಮತ್ತು ಮರುಪರಿಶೀಲಿಸಬೇಕು ಎಂದು ಅವರು ತಿಳಿಸಿದ್ದು, “ಈ ನಿರ್ಣಾಯಕ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲು ಆಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಕೇಂದ್ರವು ಮೇ 28 ರ ಶುಕ್ರವಾರದಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು.

ಅದಕ್ಕೂ ಮೊದಲು ಅಲಪನ್‌ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗೆ ಮೋದಿಯನ್ನು ಭೇಟಿ ಮಾಡಿ ಯಾಸ್‌ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ಕೇಂದ್ರವು ಕರೆದಿದ್ದ ಪುನರ್‌ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೆ ಅವರನ್ನು ಕೇಂದ್ರಕ್ಕೆ ವಾಪಾಸ್ ಕಳುಹಿಸಬೇಕು ಎಂದು ಕೇಂದ್ರವು ರಾಜ್ಯವನ್ನು ಕೇಳಿಕೊಂಡಿತ್ತು.

ಈ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಕೇಂದ್ರವು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...