Homeಕರೋನಾ ತಲ್ಲಣ‘ಅಲೋಪತಿ ನಿಂದನೆಯಲ್ಲಿ ಸ್ಪಷ್ಟೀಕರಣವಷ್ಟೇ ಸಾಲದು’: ರಾಮದೇವ್‌ಗೆ ಆರೋಗ್ಯ ಸಚಿವ ಸೂಚನೆ

‘ಅಲೋಪತಿ ನಿಂದನೆಯಲ್ಲಿ ಸ್ಪಷ್ಟೀಕರಣವಷ್ಟೇ ಸಾಲದು’: ರಾಮದೇವ್‌ಗೆ ಆರೋಗ್ಯ ಸಚಿವ ಸೂಚನೆ

- Advertisement -
- Advertisement -

ಬಾಬಾ ರಾಮದೇವ್ ಅಲೋಪಥಿ ನಿಂದನೆ ವಿವಾದದಲ್ಲಿ ಕೇವಲ ಸ್ಪಷ್ಟೀಕರಣ ನೀಡಿದರೆ ಸಾಲದು, ‘ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆಧುನಿಕ ವೈದ್ಯಕೀಯ ಚಿಕಿತ್ಸೆಗಳಿಂದ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ’ ಎಂಬ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ..

‘ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಅಲೋಪಥಿಕ್ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸತ್ತರು” ಎಂದು ರಾಮದೇವ್ ಇತ್ತೀಚಿನ ವೀಡಿಯೊವೊಂದರಲ್ಲಿ ಹೇಳಿದ್ದು, ಭಾರತೀಯ ವೈದ್ಯಕೀಯ ಸಂಸ್ಥೆ ಇದನ್ನು ಕಟುವಾಗಿ ಟೀಕಿಸಿ, ರಾಮದೇವ್ ಅವರಿಗೆ ನೋಟಿಸ್ ನೀಡಿದೆ. ಸಾಂಕ್ರಾಮಿಕ ಕಾಯ್ದೆ ಅಡಿ ಅವರ ಮೇಲೆ ಪ್ರಕರಣ ದಾಖಲಿಸಲು ಐಎಂಎ ಸರ್ಕಾರಕ್ಕೆ ಮನವಿ ಮಾಡಿದೆ. ನೂರಾರು ಜನರು ಸಾಮಾಜಿಕ ಜಾಲತಾಣದಲ್ಲಿ ರಾಮದೇವ್ ಬಂಧನಕ್ಕೆ ಆಗ್ರಹಿಸಿದ್ದಾರೆ.

‘ಅಲೋಪತಿ ಔಷಧಿಗಳ ಬಗ್ಗೆ ನಿಮ್ಮ ಹೇಳಿಕೆಯಿಂದ ದೇಶದ ಜನರು ತುಂಬಾ ನೊಂದಿದ್ದಾರೆ. ಈ ಭಾವನೆಯ ಬಗ್ಗೆ ನಾನು ಈಗಾಗಲೇ ದೂರವಾಣಿಯಲ್ಲಿ ಹೇಳಿದ್ದೇನೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ದೇಶದ ಜನರಿಗೆ ದೇವರಂತೆ ಇದ್ದಾರೆ, ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ’ ಎಂದು ಡಾ.ವರ್ಧನ್ ಬರೆದ ಎರಡು ಪುಟಗಳ ಪತ್ರದಲ್ಲಿ ಹೇಳಿದ್ದಾರೆ.

“ನೀವು ಕೊರೋನಾ ಯೋಧರನ್ನಷ್ಟೇ ಅವಮಾನಿಸಿಲ್ಲ, ಆದರೆ ದೇಶದ ಜನರ ಭಾವನೆಗಳನ್ನು ನೋಯಿಸಿದ್ದೀರಿ. ನಿನ್ನೆ ನಿಮ್ಮ ಸ್ಪಷ್ಟೀಕರಣವು ಅದನ್ನು ನಿಭಾಯಿಸಲು ಸಾಕಾಗುವುದಿಲ್ಲ … ನೀವು ಅದರ ಬಗ್ಗೆ ಗಂಭೀರವಾಗಿ ಯೋಚಿಸುತ್ತೀರಿ ಮತ್ತು ನಿಮ್ಮ ಹೇಳಿಕೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಆರೋಗ್ಯ ಸಚಿವರು ಬರೆದಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಲೀಗಲ್ ನೋಟಿಸ್ ನೀಡಿ, ಸಾಂಕ್ರಾಮಿಕ ಸಮಯದಲ್ಲಿ ಜೀವ ಉಳಿಸಲು ಶ್ರಮಿಸುತ್ತಿರುವಾಗ ಅಲೋಪತಿ ಮತ್ತು ಆಧುನಿಕ ವೈದ್ಯವಿಜ್ಞಾನ ಪ್ರಾಕ್ಟೀಸ್ ಮಾಡುವವರ ಪ್ರತಿಷ್ಠೆಗೆ ಹಾನಿ ಮಾಡಿದ ರಾಮದೇವ್ ತಮ್ಮ ಹೇಳಿಕೆಗೆ ಲಿಖಿತ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟ ವೀಡಿಯೊವೊಂದರಲ್ಲಿ, ರಾಮದೇವ್ ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ, “ಅಲೋಪತಿ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಚಿಕಿತ್ಸೆ ಅಥವಾ ಆಮ್ಲಜನಕವನ್ನು ಪಡೆಯದ ಕಾರಣ ಮರಣ ಹೊಂದಿದವರಿಗಿಂತ ಇದು ಹೆಚ್ಚು” ಎಂದು ಹೇಳುತ್ತ, ಅಲೋಪತಿಯನ್ನು “ಅವಿವೇಕಿ ಮತ್ತು ದಿವಾಳಿಯಾದ” ವಿಜ್ಞಾನ ಎಂದೂ ಕರೆಯುತ್ತಾರೆ.
(ವೀಡಿಯೊದ ಸತ್ಯಾಸತ್ಯತೆಯನ್ನು ಎನ್‌ಡಿಟಿವಿ ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ)

ಈ ಹೇಳಿಕೆಯಿಂದ ಹಿನ್ನಡೆ ಎದುರಿಸುತ್ತಿರುವ ರಾಮ್‌ದೇವ್ ಅವರ ಪತಂಜಲಿ ಗುಂಪು, ಈ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ಹೇಳಿಕೆಯನ್ನು “ಸಂದರ್ಭದಿಂದ ಬೇರ್ಪಡಿಸಲಾಗಿದೆ” ಎಂದು ಹೇಳಿದೆ. ರಾಮದೇವ್ ಅವರಿಗೆ ಆಧುನಿಕ ವಿಜ್ಞಾನದ ವೈದ್ಯರ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯವಿಲ್ಲ’ ಎಂದು ಅದು ಹೇಳಿದೆ.

“ಈ ಘಟನೆಯು ಖಾಸಗಿ ಕಾರ್ಯಕಮವಾಗಿತ್ತು. ರಾಮದೇವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸದಸ್ಯರು ಫಾರ್ವರ್ಡ್ ಮಾಡಿದ ವಾಟ್ಸಾಪ್ ಸಂದೇಶವನ್ನು ಓದುತ್ತಿದ್ದರು … ಅವರ ವಿರುದ್ಧ ಏನು ಆರೋಪಿಸಲಾಗುತ್ತಿದೆ ಎಂಬುದು ಸುಳ್ಳು’ ಎಂದು ಪತಂಜಲಿ ಹೇಳಿದೆ.

3.5 ಲಕ್ಷ ವೈದ್ಯರನ್ನು ಪ್ರತಿನಿಧಿಸುವ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಜೊತೆಗೆ, ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್ (ಫೈಮಾ) ಕೂಡ ರಾಮದೇವ್ ಅವರಿಗೆ ಲೀಗಲ್ ನೋಟಿಸ್ ನೀಡಿದೆ.

ಐಎಂಎ, ಮಾಧ್ಯಮ ಹೇಳಿಕೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತ್ತು.

ರಾಮದೇವ್ ಅವರು ಈಹಿಂದೆ ಕೊರೊನಿಲ್ ಬಿಡುಗಡೆ ಸಂದರ್ಭದಲ್ಲಿ ಸ್ವತಃ ವೈದ್ಯರೂ ಆಗಿರುವ ಆರೋಗ್ಯ ಸಚಿವರ ಸಮ್ಮುಖದಲ್ಲೇ ವೈದ್ಯರನ್ನು “ಕೊಲೆಗಾರರು” ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.

ಆಡಳಿತಾರೂಢ ಬಿಜೆಪಿ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಮ್‌ದೇವ್ ಈ ಹಿಂದಿನ ಸಾಂಕ್ರಾಮಿಕ ಸಮಯದಲ್ಲಿ ವಿವಾದವನ್ನು ಎದುರಿಸಿದ್ದಾರೆ. ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ಅವರ ಸಹೋದ್ಯೋಗಿ ನಿತಿನ್ ಗಡ್ಕರಿ ‘ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕೃತ ಔಷಧಿಗಳು’ ಎಂದಿದ್ದ ಪತಂಜಲಿಯ ಔಷಧಿಗಳನ್ನು ಬಿಡುಗಡೆ ಮಾಡಿದ್ದರು..

ವಿಶ್ವ ಆರೋಗ್ಯ ಸಂಸ್ಥೆ ‘ಕೋವಿಡ್ ಚಿಕಿತ್ಸೆಗೆ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು ಸ್ಪಷ್ಟೀಕರಣವನ್ನು ನೀಡಿತ್ತು.

ಸಾಂಕ್ರಾಮಿಕ ರೋಗದ ಎರಡನೇ ಅಲೆಯ ವಿರುದ್ಧ ಹೋರಾಡುತ್ತಾ 420 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಐಎಂಎ ಹೇಳಿದ ಒಂದು ದಿನದ ನಂತರ ರಾಮದೇವ್ ಅವರ ಇತ್ತೀಚಿನ ಹೇಳಿಕೆ ಬಂದಿದೆ. ಕಳೆದ ವರ್ಷ ಬಿಕ್ಕಟ್ಟಿನ ಆರಂಭದಿಂದೀಚೆಗೆ 1,200 ಕ್ಕಿಂತಲೂ ಹೆಚ್ಚು ವೈದ್ಯ ಸಿಬ್ಬಂದಿ ಮೃತರಾಗಿದ್ದಾರೆ.


ಇದನ್ನೂ ಓದಿ: ಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ – ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...