Homeಮುಖಪುಟಕೊರೊನಾ ವಿರುದ್ಧ ಹೋರಾಡುತ್ತಿರುವ ವರ್ಗಕ್ಕೆ ಪ್ರೋತ್ಸಾಹ ಧನ ನೀಡಬೇಕು: ಎಚ್‌ಡಿಕೆ

ಕೊರೊನಾ ವಿರುದ್ಧ ಹೋರಾಡುತ್ತಿರುವ ವರ್ಗಕ್ಕೆ ಪ್ರೋತ್ಸಾಹ ಧನ ನೀಡಬೇಕು: ಎಚ್‌ಡಿಕೆ

- Advertisement -
- Advertisement -

ಕೊರೊನಾ ವೈರಸ್ ವಿರುದ್ಧ ಸೆಣಸುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರನ್ನು ಚಪ್ಪಾಳೆ ಮೂಲಕ ಗೌರವಿಸಬೇಕೆಂಬ ಮೋದಿ ಕರೆಗೆ ಬೆಂಬಲಿಸುತ್ತಾ ನನ್ನದೊಂದು ಕೋರಿಕೆ. ವಿಪತ್ತಿನ ವಿರುದ್ಧ ಹೋರಾಡುತ್ತಿರುವ ಈ ವರ್ಗಕ್ಕೆ ಸರ್ಕಾರ Incentive (ಪ್ರೋತ್ಸಾಹ ಧನ) ಘೋಷಿಸಿ ಅವರನ್ನು ಮತ್ತಷ್ಟು ಪ್ರೋತ್ಸಾಹಿಸಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಮಯ, ಕುಟುಂಬ, ಆರೋಗ್ಯ ಲೆಕ್ಕಿಸದೇ ಧೈರ್ಯದಿಂದ ಹೋರಾಡುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರ ಪರಿಶ್ರಮವನ್ನು ಗೌರವಿಸಬೇಕು. ಪ್ರೋತ್ಸಾಹ ಧನದ ಮೂಲಕ ನೈತಿಕ, ಆರ್ಥಿಕ ಬೆಂಬಲ‌ ನೀಡಬೇಕು.‌ ಇಷ್ಟೇ ಅಲ್ಲ, ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಎಲ್ಲರಿಗೂ ‘ಗೌರವ ಪತ್ರ’ ನೀಡಿ ಅವರ ಹೋರಾಟವನ್ನು ಅಜರಾಮರಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಕಳೆದ ಫೆಬ್ರವರಿಯಿಂದಲೇ ವೈದ್ಯಕೀಯ ವೃಂದದವರು, ಪೊಲೀಸರು, ಪೌರಕಾರ್ಮಿಕರು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಫೆಬ್ರವರಿಯಿಂದ ಆರಂಭಿಸಿ, ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಯುವವರೆಗೆ ಪ್ರತಿ ತಿಂಗಳು ಇವರೆಲ್ಲರಿಗೂ ಪ್ರೋತ್ಸಾಹ ಧನ ನೀಡಬೇಕು. ಅವರ ಧೈರ್ಯ, ತ್ಯಾಗಕ್ಕೆ ಸರ್ಕಾರ ಮನ್ನಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...