Homeಮುಖಪುಟದೇವರ ವಿಗ್ರಹ ಹೊತ್ತಿದ್ದ ಕ್ರೇನ್ ಕುಸಿತ; ನಾಲ್ವರ ಸಾವು, 9 ಜನರಿಗೆ ಗಾಯ

ದೇವರ ವಿಗ್ರಹ ಹೊತ್ತಿದ್ದ ಕ್ರೇನ್ ಕುಸಿತ; ನಾಲ್ವರ ಸಾವು, 9 ಜನರಿಗೆ ಗಾಯ

- Advertisement -
- Advertisement -

ದೇವಸ್ಥಾನದ ಉತ್ಸವ ಕಾರ್ಯಕ್ರಮದ ವೇಳೆ ಕ್ರೇನ್ ಕುಸಿದುಬಿದ್ದಿರುವ ಘಟನೆ ಭಾನುವಾರ ಸಂಜೆ ತಮಿಳುನಾಡಿನ ಅರಕ್ಕೋಣಂನ ಕೀಲ್ವೀತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ. ಈ ಉತ್ಸವದಲ್ಲಿ ಕ್ರೇನ್ ಬಳಸಲು ಅನುಮತಿ ನೀಡಿಲ್ಲ ಎಂದು ವರದಿಯಾಗಿದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಸಚಿವ ಪಿ.ಕೆ.ಸೇಕರ್ ಬಾಬು ಅವರು ಸೋಮವಾರ ರಾಣಿಪೇಟೆಗೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ರಾಣಿಪೇಟೆ ಕಲೆಕ್ಟರ್ ಭಾಸ್ಕರ ಪಾಂಡಿಯನ್ ಮಾತನಾಡಿದ್ದು, “ಕ್ರೇನ್ ಆಪರೇಟರ್‍‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಕ್ರೇನ್ ದುರಂತದಲ್ಲಿ ಬಲಿಯಾದವರನ್ನು ಮುತ್ತುಕುಮಾರ್ (31), ಜ್ಯೋತಿಬಾಬು(19) ಮತ್ತು ಎಸ್ ಭೂಪಾಲನ್ (41) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಿಲ್ವೀಡಿ ಗ್ರಾಮದಲ್ಲಿ ದ್ರೌಪತಿ ಅಮ್ಮನವರ ಉತ್ಸವದ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ದೇವರ ವಿಗ್ರಹ ಹೊತ್ತ ಕ್ರೇನ್ ಪಟ್ಟಣದಾದ್ಯಂತ ಮೆರವಣಿಗೆ ಹೊರಟಿತ್ತು. ಕ್ರೇನ್‌ನಲ್ಲಿ ದೇವರ ವಿಗ್ರಹದ ಜೊತೆಗೆ ಎಂಟು ಜನರು ಇದ್ದರು. ಮೆರವಣಿಗೆ ವೇಳೆ ಕ್ರೇನ್ ಕುಸಿದು ಬಿದ್ದಿದ್ದು, ಎಂಟು ಜನರು ನೆಲಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಅರ್ಕೊನ್ನಂ ಸರ್ಕಾರಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇನ್ನು ಐವರಿಗೆ ಗಂಭೀರ ಗಾಯಗಾಳಾಗಿದ್ದು, ವೈದ್ಯರು ಗಾಯಾಳುಗಳ ಮೇಲೆ ಹೆಚ್ಚಿನ ನಿಗಾವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತ ಸಂಭವಿಸಿದಾಗ ಸುಮಾರು 1,500 ಜನರು ಅಲ್ಲಿಯ ರಸ್ತೆ ಮತ್ತು ದೇವಸ್ಥಾನದ ಆವರಣದಲ್ಲಿ ನೆರೆದಿದ್ದರು ಎಂದು ತಿಳಿದುಬಂದಿದೆ. ಈಗಾಗಲೇ ತನಿಖೆ ಪ್ರಾರಂಭಿಸಲಾಗಿದೆ ಮತ್ತು ಈ ಅಪಘಾತಕ್ಕೆ ಕಾರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ನೆಮಿಲಿ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...