Homeಮುಖಪುಟ12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

- Advertisement -
- Advertisement -

ದೇಶದ 12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ದಾಖಲೆಯ 68 ಹೆಸರುಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿರುವುದು ಅಭೂತಪೂರ್ವ ಕ್ಷಣವಾಗಿದೆ.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸೂಚಿಸಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ಮಂದಿಯು ಬಾರ್‌ ಅಸೋಸಿಯೇಷನ್‌ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.


ಇದನ್ನೂ ಓದಿ; ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...