Homeಮುಖಪುಟ12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

- Advertisement -
- Advertisement -

ದೇಶದ 12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ದಾಖಲೆಯ 68 ಹೆಸರುಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿರುವುದು ಅಭೂತಪೂರ್ವ ಕ್ಷಣವಾಗಿದೆ.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸೂಚಿಸಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ಮಂದಿಯು ಬಾರ್‌ ಅಸೋಸಿಯೇಷನ್‌ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.


ಇದನ್ನೂ ಓದಿ; ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...