Homeಮುಖಪುಟ12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

- Advertisement -
- Advertisement -

ದೇಶದ 12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ದಾಖಲೆಯ 68 ಹೆಸರುಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿರುವುದು ಅಭೂತಪೂರ್ವ ಕ್ಷಣವಾಗಿದೆ.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸೂಚಿಸಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ತಿಳಿಸಲಾಗಿದೆ.

ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ಮಂದಿಯು ಬಾರ್‌ ಅಸೋಸಿಯೇಷನ್‌ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಸೆಪ್ಟೆಂಬರ್‌ 1ರವರೆಗೆ ಹೇಳುವುದಾದರೆ 25 ಹೈಕೋರ್ಟ್‌ಗಳಲ್ಲಿ 281 ಕಾಯಂ ನ್ಯಾಯಾಧೀಶರು, 184 ಹೆಚ್ಚುವರಿ ನ್ಯಾಯಾಧೀಶರು ನೇಮಕ ಆಗಬೇಕಿದೆ. ಅದರಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ 68, ಪಂಜಾಬ್, ಹರಿಯಾಣ ಹೈಕೋರ್ಟ್‌ನಲ್ಲಿ ತಲಾ 40, ಕೊಲ್ಕತ್ತಾ ಹೈಕೋರ್ಟ್‌ನಲ್ಲಿ 36 ಹುದ್ದೆಗಳು ಭರ್ತಿಯಾಗಬೇಕಿದೆ.


ಇದನ್ನೂ ಓದಿ; ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...