Homeಮುಖಪುಟವಾಣಿಜ್ಯ LPG ಸಿಲಿಂಡರ್‌ ಬೆಲೆ ಏಕಾಏಕಿ 250 ರೂ. ಏರಿಕೆ

ವಾಣಿಜ್ಯ LPG ಸಿಲಿಂಡರ್‌ ಬೆಲೆ ಏಕಾಏಕಿ 250 ರೂ. ಏರಿಕೆ

- Advertisement -
- Advertisement -

ವಾಣಿಜ್ಯ LPG ಸಿಲಿಂಡರ್‌ ಬೆಲೆಯನ್ನು ಎಪ್ರಿಲ್ 1ರ ಶುಕ್ರವಾರ (ಇಂದು)ದಿಂದ ಮತ್ತೆ ದುಬಾರಿಯಾಗಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವು 19 ಕಿಲೋಗ್ರಾಂ ಸಿಲಿಂಡರ್‌ಗೆ 250 ರೂ. ಹೆಚ್ಚಿಸಿದೆ. ಇಂದಿನ ಪರಿಷ್ಕರಣೆ ನಂತರ, ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್‌ನ ಬೆಲೆ  2317.00 ರೂ.ಗೆ ಏರಿಕೆಯಾಗಿದೆ.

ದೆಹಲಿಯಲ್ಲಿ 2,253 ರೂ. ತಲುಪಿದ್ದು, ಕೋಲ್ಕತ್ತಾದಲ್ಲಿ ಸಿಲಿಂಡರ್ ಬೆಲೆ 2,351 ರೂ. ಗೆ ಏರಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ ರೂ. 2,205 ಮತ್ತು 2,406 ರೂ. ಗೆ ಬೆಲೆ ಏರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ರೆಸ್ಟೋರೆಂಟ್‌ಗಳು, ತಿನಿಸುಗಳು, ಟೀ ಸ್ಟಾಲ್‌ಗಳು ಮತ್ತು ಇತರ ವಾಣಿಜ್ಯ ಉದ್ದೇಶಕ್ಕಾಗಿ 19 ಕೆಜಿ ಸಿಲಿಂಡರ್‌ ಅನ್ನು ಬಳಸಲಾಗುತ್ತದೆ. ಅತಿದೊಡ್ಡ ಬಳಕೆದಾರರ ವಿಭಾಗವಾಗಿದೆ.

ನಿನ್ನೆಯಷ್ಟೆ ಇಂಧನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆಯನ್ನು ಮಾಡಿತ್ತು. ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಒಕ್ಕೂಟ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಆದಾಗ್ಯೂ, ಸಬ್ಸಿಡಿ ರಹಿತ 14.2 ಕಿಲೋಗ್ರಾಂ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆ ಇಂದು ಏರಿಕೆಯಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 949.50 ರೂ. ಇದ್ದು, ಕೆಲವೆಡೆ ಒಂದು 1000 ರೂ. ಇದೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದ ಕಾರಣಕ್ಕೆ ಮಾರ್ಚ್ 22 ರ ವರೆಗೆ ಯಾವುದೆ ದರವನ್ನು ರಾಜ್ಯ ತೈಲ ಸಂಸ್ಥೆಗಳು ದರ ಪರಿಷ್ಕರಣೆ ಮಾಡಿರಲಿಲ್ಲ. ನಾಲ್ಕೂವರೆ ತಿಂಗಳ ನಂತರ ಪ್ರತಿ ಸಿಲಿಂಡರ್‌ಗೆ ಗೃಹಬಳಕೆಯ ಅಡುಗೆ ಅನಿಲ LPG ದರವನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಇದಕ್ಕೂ ಮೊದಲು, LPG ದರಗಳನ್ನು ಕೊನೆಯದಾಗಿ ಅಕ್ಟೋಬರ್ 6, 2021 ರಂದು ಪರಿಷ್ಕರಿಸಲಾಗಿತ್ತು.

ಈ ಮಧ್ಯೆ ಕಳೆದ ಹತ್ತು ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಒಕ್ಕೂಟ ಸರ್ಕಾರ ಇಂದು ಏರಿಕೆ ಮಾಡಿಲ್ಲ. ಅದಾಗ್ಯೂ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ, 2 ಮತ್ತು ಮೂರು ಪೈಸೆ ಏರಿಕೆಯಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...