Homeಮುಖಪುಟಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ

ಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ

- Advertisement -
- Advertisement -

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ತುಳುನಾಡಿನ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಿ ಯಡವಟ್ಟು ಮಾಡಿಕೊಂಡಿದ್ದ ಬೆಂಗಳೂರು ಕಂಬಳ ಸಮಿತಿ ಕೊನೆಗೂ ತನ್ನ ನಿರ್ಧಾರ ಬದಲಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಹ್ವಾನ ವಿರೋಧಿಸಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಕಾಂಗ್ರೆಸ್‌ ಶಾಸಕ ಅಶೋಕ್ ರೈ ಕೋಡಿಂಬಾಡಿ, ವಿವಾದಿತ ಸಂಸದನನ್ನು ಕರೆಯದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಕೊನೇ ಕ್ಷಣದಲ್ಲಿ ಆಹ್ವಾನ ಪತ್ರಿಕೆಯನ್ನೂ ಹೊಸದಾಗಿ ಪ್ರಿಂಟ್‌ ಮಾಡಲು ನಿರ್ಧರಿಸಿದ್ದಾರೆ.

ಬ್ರಿಜ್ ಭೂಷಣ್‌ಗೆ ಯಾಕೆ ವಿರೋಧ?

ಆರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಬ್ರಿಜ್‌ ಭೂಷಣ್ ಎದುರಿಸುತ್ತಿದ್ದಾರೆ. ಹಲವು ಗಂಭೀರ ಅಪರಾಧ ಪ್ರಕರಣಗಳು ಬ್ರಿಜ್ ಭೂಷಣ್ ಮೇಲಿವೆ. ಅಂತಹ ವ್ಯಕ್ತಿಯನ್ನು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬೆಂಗಳೂರು ಕಂಬಳ ಸಮಿತಿ ಆಹ್ವಾನಿನಿಸಿರುವುದು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಕರ್ನಾಟಕ ಸರ್ಕಾರ ಕೂಡ ಈ ಕಂಬಳಕ್ಕಾಗಿ ಒಂದು ಕೋಟಿ ರೂ. ಘೋಷಣೆ ಮಾಡಿದೆ.

ಈ ಹಿಂದಿನ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಕುಸ್ತಿಪಟುಗಳನ್ನು ಬ್ರಿಜ್ ಭೂಷಣ್ ಅಭಿನಂದಿಸಲಿದ್ದಾರೆ ಎಂದು ಹೇಳಲಾಗಿತ್ತು. ನಟ ದರ್ಶನ್, ಮಾಜಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟದ ಅಧ್ಯಕ್ಷ ವಿಶಾಲ್ ಸಿಂಗ್ ಸನ್ಮಾನ ಸಮಾರಂಭದಲ್ಲಿ ಇತರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳ ಸಮಿತಿ ಎಂಬ ಖಾಸಗಿ ಗುಂಪು ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ನವೆಂಬರ್ 25 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮುಖ್ಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಡಿವಿ ಸದಾನಂದ ಗೌಡ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಎರಡು ದಿನಗಳ ಕಾರ್ಯಕ್ರಮದ ಅಧಿಕೃತ ಆಹ್ವಾನ ಪಟ್ಟಿಯಲ್ಲಿ ಹಲವಾರು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಹೆಸರುಗಳಿವೆ.

ಈ ಬಗ್ಗೆ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿ, ”ಸಿದ್ದಿ ಜನಾಂಗದ ಸಂಘಟನೆಯವರು ಬಂದು ಬ್ರಿಜ್ ಭೂಷಣ್ ಅವರನ್ನು ಕರೆಯುವಂತೆ ತಿಳಿಸಿದರು. ಎಲ್ಲ ಜಾತಿ ಜನಾಂಗದವರ ಮುಖಂಡರನ್ನು ಕರೆಯಲಾಗುತ್ತಿದೆ. ಸಮುದಾಯದ ಕೋರಿಕೆ ಮೇರೆಗೆ ಬ್ರಿಜ್ ಭೂಷಣ್‌ ಅವರನ್ನು ಆಹ್ವಾನಿಸಲಾಗಿದೆ. ಅವರು ಕಾರ್ಯಕ್ರಮಕ್ಕೆ ಬರುತ್ತಾರೆಂಬುದು ಖಚಿತವಿಲ್ಲ” ಎಂದು ಹೇಳಿದ್ದರು.

”ಅವರು ಕಾರ್ಯಕ್ರಮಕ್ಕೆ ಬಂದರೂ ಕಂಬಳಕ್ಕೆ ಹೊರತುಪಡಿಸಿ ಬೇರೆ ವಿಚಾರಗಳ ಕುರಿತು ಮಾತನಾಡಲು ಅನುಮತಿ ಕೊಡುವುದಿಲ್ಲ” ಎಂದು ತಿಳಿಸಿದ್ದರು.

ಇದನ್ನೂ ಓದಿ: ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...