Homeಮುಖಪುಟಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ

ಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ

- Advertisement -
- Advertisement -

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ತುಳುನಾಡಿನ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಿ ಯಡವಟ್ಟು ಮಾಡಿಕೊಂಡಿದ್ದ ಬೆಂಗಳೂರು ಕಂಬಳ ಸಮಿತಿ ಕೊನೆಗೂ ತನ್ನ ನಿರ್ಧಾರ ಬದಲಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಹ್ವಾನ ವಿರೋಧಿಸಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಕಾಂಗ್ರೆಸ್‌ ಶಾಸಕ ಅಶೋಕ್ ರೈ ಕೋಡಿಂಬಾಡಿ, ವಿವಾದಿತ ಸಂಸದನನ್ನು ಕರೆಯದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಕೊನೇ ಕ್ಷಣದಲ್ಲಿ ಆಹ್ವಾನ ಪತ್ರಿಕೆಯನ್ನೂ ಹೊಸದಾಗಿ ಪ್ರಿಂಟ್‌ ಮಾಡಲು ನಿರ್ಧರಿಸಿದ್ದಾರೆ.

ಬ್ರಿಜ್ ಭೂಷಣ್‌ಗೆ ಯಾಕೆ ವಿರೋಧ?

ಆರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಬ್ರಿಜ್‌ ಭೂಷಣ್ ಎದುರಿಸುತ್ತಿದ್ದಾರೆ. ಹಲವು ಗಂಭೀರ ಅಪರಾಧ ಪ್ರಕರಣಗಳು ಬ್ರಿಜ್ ಭೂಷಣ್ ಮೇಲಿವೆ. ಅಂತಹ ವ್ಯಕ್ತಿಯನ್ನು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬೆಂಗಳೂರು ಕಂಬಳ ಸಮಿತಿ ಆಹ್ವಾನಿನಿಸಿರುವುದು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಕರ್ನಾಟಕ ಸರ್ಕಾರ ಕೂಡ ಈ ಕಂಬಳಕ್ಕಾಗಿ ಒಂದು ಕೋಟಿ ರೂ. ಘೋಷಣೆ ಮಾಡಿದೆ.

ಈ ಹಿಂದಿನ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಕುಸ್ತಿಪಟುಗಳನ್ನು ಬ್ರಿಜ್ ಭೂಷಣ್ ಅಭಿನಂದಿಸಲಿದ್ದಾರೆ ಎಂದು ಹೇಳಲಾಗಿತ್ತು. ನಟ ದರ್ಶನ್, ಮಾಜಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟದ ಅಧ್ಯಕ್ಷ ವಿಶಾಲ್ ಸಿಂಗ್ ಸನ್ಮಾನ ಸಮಾರಂಭದಲ್ಲಿ ಇತರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳ ಸಮಿತಿ ಎಂಬ ಖಾಸಗಿ ಗುಂಪು ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ನವೆಂಬರ್ 25 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮುಖ್ಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಡಿವಿ ಸದಾನಂದ ಗೌಡ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಎರಡು ದಿನಗಳ ಕಾರ್ಯಕ್ರಮದ ಅಧಿಕೃತ ಆಹ್ವಾನ ಪಟ್ಟಿಯಲ್ಲಿ ಹಲವಾರು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಹೆಸರುಗಳಿವೆ.

ಈ ಬಗ್ಗೆ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿ, ”ಸಿದ್ದಿ ಜನಾಂಗದ ಸಂಘಟನೆಯವರು ಬಂದು ಬ್ರಿಜ್ ಭೂಷಣ್ ಅವರನ್ನು ಕರೆಯುವಂತೆ ತಿಳಿಸಿದರು. ಎಲ್ಲ ಜಾತಿ ಜನಾಂಗದವರ ಮುಖಂಡರನ್ನು ಕರೆಯಲಾಗುತ್ತಿದೆ. ಸಮುದಾಯದ ಕೋರಿಕೆ ಮೇರೆಗೆ ಬ್ರಿಜ್ ಭೂಷಣ್‌ ಅವರನ್ನು ಆಹ್ವಾನಿಸಲಾಗಿದೆ. ಅವರು ಕಾರ್ಯಕ್ರಮಕ್ಕೆ ಬರುತ್ತಾರೆಂಬುದು ಖಚಿತವಿಲ್ಲ” ಎಂದು ಹೇಳಿದ್ದರು.

”ಅವರು ಕಾರ್ಯಕ್ರಮಕ್ಕೆ ಬಂದರೂ ಕಂಬಳಕ್ಕೆ ಹೊರತುಪಡಿಸಿ ಬೇರೆ ವಿಚಾರಗಳ ಕುರಿತು ಮಾತನಾಡಲು ಅನುಮತಿ ಕೊಡುವುದಿಲ್ಲ” ಎಂದು ತಿಳಿಸಿದ್ದರು.

ಇದನ್ನೂ ಓದಿ: ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...