Homeಮುಖಪುಟಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ

ಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ

- Advertisement -
- Advertisement -

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ತುಳುನಾಡಿನ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಿ ಯಡವಟ್ಟು ಮಾಡಿಕೊಂಡಿದ್ದ ಬೆಂಗಳೂರು ಕಂಬಳ ಸಮಿತಿ ಕೊನೆಗೂ ತನ್ನ ನಿರ್ಧಾರ ಬದಲಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಹ್ವಾನ ವಿರೋಧಿಸಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಕಾಂಗ್ರೆಸ್‌ ಶಾಸಕ ಅಶೋಕ್ ರೈ ಕೋಡಿಂಬಾಡಿ, ವಿವಾದಿತ ಸಂಸದನನ್ನು ಕರೆಯದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಕೊನೇ ಕ್ಷಣದಲ್ಲಿ ಆಹ್ವಾನ ಪತ್ರಿಕೆಯನ್ನೂ ಹೊಸದಾಗಿ ಪ್ರಿಂಟ್‌ ಮಾಡಲು ನಿರ್ಧರಿಸಿದ್ದಾರೆ.

ಬ್ರಿಜ್ ಭೂಷಣ್‌ಗೆ ಯಾಕೆ ವಿರೋಧ?

ಆರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಬ್ರಿಜ್‌ ಭೂಷಣ್ ಎದುರಿಸುತ್ತಿದ್ದಾರೆ. ಹಲವು ಗಂಭೀರ ಅಪರಾಧ ಪ್ರಕರಣಗಳು ಬ್ರಿಜ್ ಭೂಷಣ್ ಮೇಲಿವೆ. ಅಂತಹ ವ್ಯಕ್ತಿಯನ್ನು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬೆಂಗಳೂರು ಕಂಬಳ ಸಮಿತಿ ಆಹ್ವಾನಿನಿಸಿರುವುದು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಕರ್ನಾಟಕ ಸರ್ಕಾರ ಕೂಡ ಈ ಕಂಬಳಕ್ಕಾಗಿ ಒಂದು ಕೋಟಿ ರೂ. ಘೋಷಣೆ ಮಾಡಿದೆ.

ಈ ಹಿಂದಿನ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಕುಸ್ತಿಪಟುಗಳನ್ನು ಬ್ರಿಜ್ ಭೂಷಣ್ ಅಭಿನಂದಿಸಲಿದ್ದಾರೆ ಎಂದು ಹೇಳಲಾಗಿತ್ತು. ನಟ ದರ್ಶನ್, ಮಾಜಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟದ ಅಧ್ಯಕ್ಷ ವಿಶಾಲ್ ಸಿಂಗ್ ಸನ್ಮಾನ ಸಮಾರಂಭದಲ್ಲಿ ಇತರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳ ಸಮಿತಿ ಎಂಬ ಖಾಸಗಿ ಗುಂಪು ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ನವೆಂಬರ್ 25 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮುಖ್ಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಡಿವಿ ಸದಾನಂದ ಗೌಡ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಎರಡು ದಿನಗಳ ಕಾರ್ಯಕ್ರಮದ ಅಧಿಕೃತ ಆಹ್ವಾನ ಪಟ್ಟಿಯಲ್ಲಿ ಹಲವಾರು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಹೆಸರುಗಳಿವೆ.

ಈ ಬಗ್ಗೆ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿ, ”ಸಿದ್ದಿ ಜನಾಂಗದ ಸಂಘಟನೆಯವರು ಬಂದು ಬ್ರಿಜ್ ಭೂಷಣ್ ಅವರನ್ನು ಕರೆಯುವಂತೆ ತಿಳಿಸಿದರು. ಎಲ್ಲ ಜಾತಿ ಜನಾಂಗದವರ ಮುಖಂಡರನ್ನು ಕರೆಯಲಾಗುತ್ತಿದೆ. ಸಮುದಾಯದ ಕೋರಿಕೆ ಮೇರೆಗೆ ಬ್ರಿಜ್ ಭೂಷಣ್‌ ಅವರನ್ನು ಆಹ್ವಾನಿಸಲಾಗಿದೆ. ಅವರು ಕಾರ್ಯಕ್ರಮಕ್ಕೆ ಬರುತ್ತಾರೆಂಬುದು ಖಚಿತವಿಲ್ಲ” ಎಂದು ಹೇಳಿದ್ದರು.

”ಅವರು ಕಾರ್ಯಕ್ರಮಕ್ಕೆ ಬಂದರೂ ಕಂಬಳಕ್ಕೆ ಹೊರತುಪಡಿಸಿ ಬೇರೆ ವಿಚಾರಗಳ ಕುರಿತು ಮಾತನಾಡಲು ಅನುಮತಿ ಕೊಡುವುದಿಲ್ಲ” ಎಂದು ತಿಳಿಸಿದ್ದರು.

ಇದನ್ನೂ ಓದಿ: ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...