Homeಕರ್ನಾಟಕ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

- Advertisement -
- Advertisement -

ವೈಯಕ್ತಿಕ ದ್ವೇಷದಿಂದ ಸಂಚೊಂದು ರೂಪಿಸಿ ಅದರಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಪ್ರಕರಣಕ್ಕೆ, ಕೋಮು ಆಯಾಮ ನೀಡಿ ವರದಿ ಮಾಡಿದ ಪಬ್ಲಿಕ್‌ ಟಿವಿ ವರದಿಗಾರನಿಗೆ ಡಿಸಿಪಿ ಭೀಮಾ ಶಂಕರ್ ಗುಳೇದ್ ಅವರು ಪತ್ರಿಕಾಗೋಷ್ಠಿಯಲ್ಲೇ ಕ್ಲಾಸ್ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಹಣಕಾಸಿನ ವಿಚಾರವಾಗಿ ಪರಸ್ಪರ ದ್ವೇಷದಿಂದ ಸಂಚಿನಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಸೋಮವಾರದಂದು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದರು. ಆದರೆ ಕನ್ನಡ ಸುದ್ದಿ ಚಾನೆಲ್‌ಗಳಾದ ದಿಗ್ವಿಜಯ ನ್ಯೂಸ್ ಮತ್ತು ಪಬ್ಲಿಕ್ ಟಿವಿ ಘಟನೆಗೆ ‘ಕೋಮು ಆಯಾಮ’ವನ್ನು ಸೇರಿಸಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಹಲವಾರು ವರದಿ ಮಾಡುವ ಮೂಲಕ ‘ಕೋಮು ಗಲಭೆ’ಗೆ ಕುಮ್ಮಕ್ಕು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಸಂಜೆ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಡಿಸಿಪಿ ಭೀಮಾ ಶಂಕರ್ ಗುಳೇದ್, “ಪ್ರಕರಣವು ವೈಯಕ್ತಿಕ ದ್ವೇಷದ್ದಾಗಿದ್ದು, ಯಾವುದೆ ಕೋಮು ಆಯಾಮದಿಂದ ನಡೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಈ ವೇಳೆ ಪಬ್ಲಿಕ್ ಟಿವಿ ವರದಿಗಾರ ಮುರಳಿ ಎಂಬವರು ಘಟನೆಗೆ, ಕೋಮು ಆಯಾಮ ಇದೆಯೆ ಎಂಬಂತ ಪ್ರಶ್ನೆಗಳನ್ನು ಪದೇ ಪದೇ ಕೇಳಿದಾಗ ಆಕ್ರೋಶ ಭರಿತರಾದ ಡಿಸಿಪಿ, “ಘಟನೆಗೆ ಯಾವುದೆ ಕೋಮು ಆಯಾಮ ಇಲ್ಲ ಎಂಬ ಬಗ್ಗೆ ನಾನು ಬೆಳಿಗ್ಗೆಯೆ ನಿಮಗೆ ಸ್ಪಷ್ಟವಾಗಿ ಹೇಳಿದ್ದೇನೆ. ಆದರೂ ನೀವು ಆ ತರ ಬರೆಯುತ್ತೀರಲ್ಲ. ನಾನು ನಿಮಗೆ ತುಂಬಾ ತುಂಬಾ ನಿರ್ದಿಷ್ಠವಾಗಿ ಘಟನೆಗೆ ಕೋಮು ಆಯಾಮ ಇಲ್ಲ ಹೇಳಿದ್ದೇನೆ” ಎಂದು ಹೇಳಿದ್ದಾರೆ.

“ಈ ಘಟನೆಗೂ ಹಿಂದೂಗಳ ಭಜನೆಗೂ ಯಾವುದೆ ಸಂಬಂಧವಿಲ್ಲ ಎಂದು ಹೇಳಿದ್ದೇನೆ. ಬಾಯಿಗೆ ಬಂದಿದ್ದು ಬರೀತಿರಾ ನೀವು. ಏನು ಬರೆದಿದ್ದೀರಾ ನೀವು? ನೋಡಿ” ಎಂದು ಕಿಡಿ ಕಾರಿದ್ದಾರೆ.

ಹೆಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ, ಫಯಾಝ್‌ ಎಂಬುವರು 35 ಲಕ್ಷಕ್ಕೆ ಮನೆಯೊಂದನ್ನು ಮಾರಿದ್ದರು. ಈ ಮನೆಯನ್ನು ಅಝೀಮ್‌ ಎಂಬ ವ್ಯಕ್ತಿ ಮಾರಾಟ ಮಾಡಿಸಿದ್ದ. ಇದರ ನಂತರ ಮನೆಗೆ 40 ಲಕ್ಷ ನೀಡಬೇಕು ಎಂದು ಫಯಾಝ್‌‌ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಇಬ್ಬರ ನಡುವೆ ದ್ವೇಷ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಫಯಾಝ್, ಮುನಾವರ್‌ ಮತ್ತು ಅಸ್ಗರ್‌ ಎಂಬವರು ಸೇರಿ, ಅಝೀಮ್‌ ಮತ್ತು ಆತನ ಸಂಗಡಿಗರ ವಿರುದ್ದ ದ್ವೇಷದಿಂದ ಸಂಚೊಂದನ್ನು ರೂಪಿಸಿದ್ದರು. ಇದೀಗ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

ಆರೋಪಿಗಳ ಬಂಧನ ನಡೆಯುತ್ತಿದ್ದಂತೆ ಪಬ್ಲಿಕ್ ಟಿವಿ ಮತ್ತು ದಿಗ್ವಿಜಯ ಟಿವಿ ತನ್ನ ಒಂದು ವಿಡಿಯೊ ಸುದ್ದಿಯಲ್ಲಿ, “ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಸಂಚು. ಹನುಮಾನ್ ಚಾಲಿಸಾಗೆ ಪ್ರತಿಯಾಗಿ ಪೆಟ್ರೋಲ್ ಬಾಂಬ್. ಹಿಂದೂ ದೇವಸ್ಥಾನಗಳ ಮೇಲೆ ಪೆಟ್ರೋಲ್ ಬಾಂಬ್ ಹುನ್ನಾರ. ಹತ್ತು ಬಿಯರ್‌ ಬಾಟಲಿಗಳಲ್ಲಿ ಪೆಟ್ರೋಲ್ ದಾಳಿಗೆ ಪ್ಲಾನ್ ಮಾಡಿದ್ದಾರೆ” ಎಂದು ಕಪೋಲಕಲ್ಪಿತ ಸುಳ್ಳು ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...