Homeಕರ್ನಾಟಕ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

- Advertisement -
- Advertisement -

ವೈಯಕ್ತಿಕ ದ್ವೇಷದಿಂದ ಸಂಚೊಂದು ರೂಪಿಸಿ ಅದರಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಪ್ರಕರಣಕ್ಕೆ, ಕೋಮು ಆಯಾಮ ನೀಡಿ ವರದಿ ಮಾಡಿದ ಪಬ್ಲಿಕ್‌ ಟಿವಿ ವರದಿಗಾರನಿಗೆ ಡಿಸಿಪಿ ಭೀಮಾ ಶಂಕರ್ ಗುಳೇದ್ ಅವರು ಪತ್ರಿಕಾಗೋಷ್ಠಿಯಲ್ಲೇ ಕ್ಲಾಸ್ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಹಣಕಾಸಿನ ವಿಚಾರವಾಗಿ ಪರಸ್ಪರ ದ್ವೇಷದಿಂದ ಸಂಚಿನಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಸೋಮವಾರದಂದು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದರು. ಆದರೆ ಕನ್ನಡ ಸುದ್ದಿ ಚಾನೆಲ್‌ಗಳಾದ ದಿಗ್ವಿಜಯ ನ್ಯೂಸ್ ಮತ್ತು ಪಬ್ಲಿಕ್ ಟಿವಿ ಘಟನೆಗೆ ‘ಕೋಮು ಆಯಾಮ’ವನ್ನು ಸೇರಿಸಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಹಲವಾರು ವರದಿ ಮಾಡುವ ಮೂಲಕ ‘ಕೋಮು ಗಲಭೆ’ಗೆ ಕುಮ್ಮಕ್ಕು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಸಂಜೆ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಡಿಸಿಪಿ ಭೀಮಾ ಶಂಕರ್ ಗುಳೇದ್, “ಪ್ರಕರಣವು ವೈಯಕ್ತಿಕ ದ್ವೇಷದ್ದಾಗಿದ್ದು, ಯಾವುದೆ ಕೋಮು ಆಯಾಮದಿಂದ ನಡೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಈ ವೇಳೆ ಪಬ್ಲಿಕ್ ಟಿವಿ ವರದಿಗಾರ ಮುರಳಿ ಎಂಬವರು ಘಟನೆಗೆ, ಕೋಮು ಆಯಾಮ ಇದೆಯೆ ಎಂಬಂತ ಪ್ರಶ್ನೆಗಳನ್ನು ಪದೇ ಪದೇ ಕೇಳಿದಾಗ ಆಕ್ರೋಶ ಭರಿತರಾದ ಡಿಸಿಪಿ, “ಘಟನೆಗೆ ಯಾವುದೆ ಕೋಮು ಆಯಾಮ ಇಲ್ಲ ಎಂಬ ಬಗ್ಗೆ ನಾನು ಬೆಳಿಗ್ಗೆಯೆ ನಿಮಗೆ ಸ್ಪಷ್ಟವಾಗಿ ಹೇಳಿದ್ದೇನೆ. ಆದರೂ ನೀವು ಆ ತರ ಬರೆಯುತ್ತೀರಲ್ಲ. ನಾನು ನಿಮಗೆ ತುಂಬಾ ತುಂಬಾ ನಿರ್ದಿಷ್ಠವಾಗಿ ಘಟನೆಗೆ ಕೋಮು ಆಯಾಮ ಇಲ್ಲ ಹೇಳಿದ್ದೇನೆ” ಎಂದು ಹೇಳಿದ್ದಾರೆ.

“ಈ ಘಟನೆಗೂ ಹಿಂದೂಗಳ ಭಜನೆಗೂ ಯಾವುದೆ ಸಂಬಂಧವಿಲ್ಲ ಎಂದು ಹೇಳಿದ್ದೇನೆ. ಬಾಯಿಗೆ ಬಂದಿದ್ದು ಬರೀತಿರಾ ನೀವು. ಏನು ಬರೆದಿದ್ದೀರಾ ನೀವು? ನೋಡಿ” ಎಂದು ಕಿಡಿ ಕಾರಿದ್ದಾರೆ.

ಹೆಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ, ಫಯಾಝ್‌ ಎಂಬುವರು 35 ಲಕ್ಷಕ್ಕೆ ಮನೆಯೊಂದನ್ನು ಮಾರಿದ್ದರು. ಈ ಮನೆಯನ್ನು ಅಝೀಮ್‌ ಎಂಬ ವ್ಯಕ್ತಿ ಮಾರಾಟ ಮಾಡಿಸಿದ್ದ. ಇದರ ನಂತರ ಮನೆಗೆ 40 ಲಕ್ಷ ನೀಡಬೇಕು ಎಂದು ಫಯಾಝ್‌‌ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಇಬ್ಬರ ನಡುವೆ ದ್ವೇಷ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಫಯಾಝ್, ಮುನಾವರ್‌ ಮತ್ತು ಅಸ್ಗರ್‌ ಎಂಬವರು ಸೇರಿ, ಅಝೀಮ್‌ ಮತ್ತು ಆತನ ಸಂಗಡಿಗರ ವಿರುದ್ದ ದ್ವೇಷದಿಂದ ಸಂಚೊಂದನ್ನು ರೂಪಿಸಿದ್ದರು. ಇದೀಗ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

ಆರೋಪಿಗಳ ಬಂಧನ ನಡೆಯುತ್ತಿದ್ದಂತೆ ಪಬ್ಲಿಕ್ ಟಿವಿ ಮತ್ತು ದಿಗ್ವಿಜಯ ಟಿವಿ ತನ್ನ ಒಂದು ವಿಡಿಯೊ ಸುದ್ದಿಯಲ್ಲಿ, “ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಸಂಚು. ಹನುಮಾನ್ ಚಾಲಿಸಾಗೆ ಪ್ರತಿಯಾಗಿ ಪೆಟ್ರೋಲ್ ಬಾಂಬ್. ಹಿಂದೂ ದೇವಸ್ಥಾನಗಳ ಮೇಲೆ ಪೆಟ್ರೋಲ್ ಬಾಂಬ್ ಹುನ್ನಾರ. ಹತ್ತು ಬಿಯರ್‌ ಬಾಟಲಿಗಳಲ್ಲಿ ಪೆಟ್ರೋಲ್ ದಾಳಿಗೆ ಪ್ಲಾನ್ ಮಾಡಿದ್ದಾರೆ” ಎಂದು ಕಪೋಲಕಲ್ಪಿತ ಸುಳ್ಳು ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...