Homeಮುಖಪುಟತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ಕುಂಭ 12 ವರ್ಷಗಳಿಗೊಮ್ಮೆ ಬರುತ್ತದೆ ಮತ್ತು ಲಕ್ಷಾಂತರ ಜನರ ನಂಬಿಕೆ ಮತ್ತು ಭಾವನೆಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಕುಂಭಮೇಳ ಆಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಕಳೆದ ವರ್ಷದ ಮಾರ್ಚ್ ಮಧ್ಯಭಾಗದಲ್ಲಿ ತಬ್ಲಿಗಿಗಳು ದೆಹಲಿಯ ಮರ್ಕಜ್‌ನಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮ ಮತ್ತು ಈಗ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೂ ಹೋಲಿಸುವುದು ಸರಿಯಲ್ಲ ಎಂದು ಉತ್ತರಖಂಡ ಸಿಎಂ ತಿರತ್ ಸಿಂಗ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ದಿನನಿತ್ಯದ ಪ್ರಕರಗಳು 2 ಲಕ್ಷದವರೆಗೆ ಏರುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದು ಸರಿಯೇ? ನಿಜಾಮುದ್ದೀನ್ ಮರ್ಕಜ್ ಮತ್ತು ಕುಂಭಮೇಳ ಎರಡು ಧಾರ್ಮಿಕ ಘಟನೆಗಳನ್ನು ಏಕೆ ಸಮೀಕರಿಸಬಾರದು ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು “ಮರ್ಕಜ್‌ನಲ್ಲಿ ಕಿರಿದಾದ ಜಾಗದಲ್ಲಿ, ಕಟ್ಟಡದ ಒಳಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಅದರಲ್ಲಿ ವಿದೇಶಿಯರೂ ಭಾಗವಹಿಸಿದ್ದರು. ಆದರೆ ಕುಂಭಮೇಳವನ್ನು ವಿಶಾಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಮತ್ತು ನಮ್ಮ ಭಕ್ತರು ಮಾತ್ರ ಭಾಗವಹಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಮರ್ಕಜ್ ಕಾರ್ಯಕ್ರಮ ನಡೆದಾಗ ಕೊರೊನಾದ ಬಗ್ಗೆ ಹೆಚ್ಚಿನ ಅರಿವು ಇರಲಿಲ್ಲ ಅಥವಾ ಯಾವುದೇ ಮಾರ್ಗಸೂಚಿಗಳಿಲ್ಲ. ಮರ್ಕಜ್‌ನಲ್ಲಿ ಪಾಲ್ಗೊಳ್ಳುವವರು ಎಷ್ಟು ದಿನ ಉಳಿದಿದ್ದಾರೆಂದು ಯಾರಿಗೂ ತಿಳಿದಿಲ್ಲ. ಈಗ ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಿರತ್ ಸಿಂಗ್ ರಾವತ್

ಕುಂಭ 12 ವರ್ಷಗಳಿಗೊಮ್ಮೆ ಬರುತ್ತದೆ ಮತ್ತು ಲಕ್ಷಾಂತರ ಜನರ ನಂಬಿಕೆ ಮತ್ತು ಭಾವನೆಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಕುಂಭಮೇಳ ಆಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ಜನರ ಆರೋಗ್ಯವು ಆದ್ಯತೆಯಾಗಿದೆ ಆದರೆ ನಂಬಿಕೆಯ ವಿಷಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುವುದಿಲ್ಲ. ಪ್ರಕರಣಗಳು ತಡವಾಗಿ ಏರಿಕೆಯಾಗುತ್ತಿವೆ ಆದರೆ ನಾವು ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ ಮತ್ತು ನಮ್ಮಲ್ಲಿ ಚೇತರಿಕೆಯ ಪ್ರಮಾಣವು ಉತ್ತಮವಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ವ್ಯವಸ್ಥೆಗಳು ಸಹ ಸಮರ್ಪಕವಾಗಿವೆ” ಎಂದು ಅವರು ಹೇಳಿದ್ದಾರೆ.

ಕುಂಭಮೇಳ ಪ್ರದೇಶದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ದೊಡ್ಡ ಪ್ರಮಾಣದ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಅನುಸರಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಇಡೀ ಆಡಳಿತ ಯಂತ್ರಾಂಗ ಹಗಲು ರಾತ್ರಿ ಕೆಲಸ ಮಾಡುತ್ತಿವೆ ಎಂದು ತಿರತ್ ಸಿಂಗ್ ರಾವತ್ ತಿಳಿಸಿದ್ದಾರೆ.

ಇದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿದ್ದು, ಕಳೆದ ವರ್ಷ ಸಾಂಕ್ರಾಮಿಕ ಇನ್ನು ಆರಂಭಿಕ ಹಂತದಲ್ಲಿತ್ತು. ಸರ್ಕಾರಕ್ಕೆ ಅದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ ಮತ್ತು ಕೇವಲ 3 ಸಾವಿರ ಜನ ಅಲ್ಲಿ ಭಾಗವಹಿಸಿದ್ದರು. ಆದರೆ ಈಗ ಕೊರೊನಾ ಎಂತಹ ಅಪಾಯಕಾರಿ ಸಾಂಕ್ರಾಮಿಕ ಎಂದು ನಮಗೆ ತಿಳಿದಿದೆ, ಆದರೂ ಕುಂಭಮೇಳದಲ್ಲಿ 35 ಲಕ್ಷ ಜನ ಭಾಗವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...