Homeಮುಖಪುಟತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ಕುಂಭ 12 ವರ್ಷಗಳಿಗೊಮ್ಮೆ ಬರುತ್ತದೆ ಮತ್ತು ಲಕ್ಷಾಂತರ ಜನರ ನಂಬಿಕೆ ಮತ್ತು ಭಾವನೆಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಕುಂಭಮೇಳ ಆಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಕಳೆದ ವರ್ಷದ ಮಾರ್ಚ್ ಮಧ್ಯಭಾಗದಲ್ಲಿ ತಬ್ಲಿಗಿಗಳು ದೆಹಲಿಯ ಮರ್ಕಜ್‌ನಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮ ಮತ್ತು ಈಗ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೂ ಹೋಲಿಸುವುದು ಸರಿಯಲ್ಲ ಎಂದು ಉತ್ತರಖಂಡ ಸಿಎಂ ತಿರತ್ ಸಿಂಗ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ದಿನನಿತ್ಯದ ಪ್ರಕರಗಳು 2 ಲಕ್ಷದವರೆಗೆ ಏರುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದು ಸರಿಯೇ? ನಿಜಾಮುದ್ದೀನ್ ಮರ್ಕಜ್ ಮತ್ತು ಕುಂಭಮೇಳ ಎರಡು ಧಾರ್ಮಿಕ ಘಟನೆಗಳನ್ನು ಏಕೆ ಸಮೀಕರಿಸಬಾರದು ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು “ಮರ್ಕಜ್‌ನಲ್ಲಿ ಕಿರಿದಾದ ಜಾಗದಲ್ಲಿ, ಕಟ್ಟಡದ ಒಳಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಅದರಲ್ಲಿ ವಿದೇಶಿಯರೂ ಭಾಗವಹಿಸಿದ್ದರು. ಆದರೆ ಕುಂಭಮೇಳವನ್ನು ವಿಶಾಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಮತ್ತು ನಮ್ಮ ಭಕ್ತರು ಮಾತ್ರ ಭಾಗವಹಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಮರ್ಕಜ್ ಕಾರ್ಯಕ್ರಮ ನಡೆದಾಗ ಕೊರೊನಾದ ಬಗ್ಗೆ ಹೆಚ್ಚಿನ ಅರಿವು ಇರಲಿಲ್ಲ ಅಥವಾ ಯಾವುದೇ ಮಾರ್ಗಸೂಚಿಗಳಿಲ್ಲ. ಮರ್ಕಜ್‌ನಲ್ಲಿ ಪಾಲ್ಗೊಳ್ಳುವವರು ಎಷ್ಟು ದಿನ ಉಳಿದಿದ್ದಾರೆಂದು ಯಾರಿಗೂ ತಿಳಿದಿಲ್ಲ. ಈಗ ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಿರತ್ ಸಿಂಗ್ ರಾವತ್

ಕುಂಭ 12 ವರ್ಷಗಳಿಗೊಮ್ಮೆ ಬರುತ್ತದೆ ಮತ್ತು ಲಕ್ಷಾಂತರ ಜನರ ನಂಬಿಕೆ ಮತ್ತು ಭಾವನೆಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಕುಂಭಮೇಳ ಆಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ಜನರ ಆರೋಗ್ಯವು ಆದ್ಯತೆಯಾಗಿದೆ ಆದರೆ ನಂಬಿಕೆಯ ವಿಷಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುವುದಿಲ್ಲ. ಪ್ರಕರಣಗಳು ತಡವಾಗಿ ಏರಿಕೆಯಾಗುತ್ತಿವೆ ಆದರೆ ನಾವು ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ ಮತ್ತು ನಮ್ಮಲ್ಲಿ ಚೇತರಿಕೆಯ ಪ್ರಮಾಣವು ಉತ್ತಮವಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ವ್ಯವಸ್ಥೆಗಳು ಸಹ ಸಮರ್ಪಕವಾಗಿವೆ” ಎಂದು ಅವರು ಹೇಳಿದ್ದಾರೆ.

ಕುಂಭಮೇಳ ಪ್ರದೇಶದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ದೊಡ್ಡ ಪ್ರಮಾಣದ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಅನುಸರಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಇಡೀ ಆಡಳಿತ ಯಂತ್ರಾಂಗ ಹಗಲು ರಾತ್ರಿ ಕೆಲಸ ಮಾಡುತ್ತಿವೆ ಎಂದು ತಿರತ್ ಸಿಂಗ್ ರಾವತ್ ತಿಳಿಸಿದ್ದಾರೆ.

ಇದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿದ್ದು, ಕಳೆದ ವರ್ಷ ಸಾಂಕ್ರಾಮಿಕ ಇನ್ನು ಆರಂಭಿಕ ಹಂತದಲ್ಲಿತ್ತು. ಸರ್ಕಾರಕ್ಕೆ ಅದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ ಮತ್ತು ಕೇವಲ 3 ಸಾವಿರ ಜನ ಅಲ್ಲಿ ಭಾಗವಹಿಸಿದ್ದರು. ಆದರೆ ಈಗ ಕೊರೊನಾ ಎಂತಹ ಅಪಾಯಕಾರಿ ಸಾಂಕ್ರಾಮಿಕ ಎಂದು ನಮಗೆ ತಿಳಿದಿದೆ, ಆದರೂ ಕುಂಭಮೇಳದಲ್ಲಿ 35 ಲಕ್ಷ ಜನ ಭಾಗವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...