Homeಮುಖಪುಟಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

ಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

- Advertisement -
- Advertisement -

ಕಾಶ್ಮೀರದ ಶ್ರೀನಗರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದು, ಇಂದು ನಡೆಯಲಿರುವ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯ ಸಮಾರೋಪ ಸಮಾರಂಭದ ಸಂಭ್ರಮಾಚರಣೆಯ ಉತ್ಸಾಹವನ್ನು ಕುಗ್ಗಿಸಬಹುದು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 135 ದಿನಗಳ ಸುದೀರ್ಘ ಕಾಲ ಸಾಗಿ ಬಂದಿರುವ ಈ ಯಾತ್ರೆ ಇದೀಗ ಅಂತಿಮ ಘಟ್ಟ ತಲುಪಿದೆ.

ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮೆಗಾ ರ್ಯಾಲಿಯನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕತ್ವದಲ್ಲಿ ನಡೆಯುತ್ತಿರುವ ಈ ರ್ಯಾಲಿಯಲ್ಲಿ ವಿರೋಧ ಪಕ್ಷಗಳ ಹನ್ನೆರಡು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ನಡುವೆ ಹಿಮಪಾತವಾಗುತ್ತಿರುವುದರಿಂದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚುವಂತೆ ಸ್ಥಿತಿ ಎದುರಾಗಿದೆ ಮತ್ತು ವಿಮಾನ ಸಂಚಾರಕ್ಕೂ ಅಡ್ಡಿಪಡಿಸಬಹುದು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯ ಅಂತಿಮ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದ್ದ ಹಲವು ವಿರೋಧ ಪಕ್ಷದ ನಾಯಕರು ಭಾಗವಹಿಸಲು ಸಾಧ್ಯವಾಗದಿರಬಹುದು.

ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ಟ್ವಿಟ್ ಮಾಡಿದ್ದು, “ನಿರಂತರವಾಗಿ ಹಿಮ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಾಗಿದೆ ಹಾಗಾಗಿ ಶ್ರೀನಗರಕ್ಕೆ ಬರುವ ಎಲ್ಲಾ ವಿಮಾನಗಳು ವಿಳಂಬವಾಗಿವೆ” ಎಂದು ಶ್ರೀನಗರದ ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ತಿಳಿಸಿದ್ದಾರೆ.

ವಿಸ್ತಾರಾ ಏರ್‌ಲೈನ್ಸ್ ದೆಹಲಿಯಿಂದ ಶ್ರೀನಗರಕ್ಕೆ ಹೊರಡುವ ತನ್ನ ಎರಡೂ ವಿಮಾನಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಿದೆ.

ಸಮಾರೋಪ ಸಮಾರಂಭವು ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಲಿದ್ದು, ನಂತರ ಕ್ರೀಡಾಂಗಣದಲ್ಲಿ ರ್ಯಾಲಿ ನಡೆಯಲಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ.

ರಾಹುಲ್ ಗಾಂಧಿ ಅವರು, ಭಾನುವಾರ ಲಾಲ್ ಚೌಕ್ ಪ್ರದೇಶದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ “ಪಾದಯಾತ್ರೆ” ಮುಕ್ತಾಯಗೊಳಿಸಿದರು. ಆದರೆ ಶ್ರೀನಗರದಲ್ಲಿ ಹಿಮಪಾತವಾಗಿರುವುದರಿಂದ, ಸೋಮವಾರ ನಡೆಯುವ ಅಧಿಕೃತ ಸಮಾರೋಪ ಕಾರ್ಯಕ್ರಮದ ಉತ್ಸಾಹವನ್ನು ಕುಗ್ಗಿಸುಬಹುದು.

ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿಪಿಐ, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಗಳು ಈ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೃಢಪಡಿಸಿವೆ.

ಕನ್ಯಾಕುಮಾರಿಯಿಂದ ಕಾಶ್ಮೀರ ಯಾತ್ರೆಯು ದೇಶದ ದಕ್ಷಿಣ ತುದಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಯಿತು ಮತ್ತು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 3,970 ಕಿಮೀ ಕ್ರಮಿಸಿದ ನಂತರ ಶ್ರೀನಗರದಲ್ಲಿ ಇಂದು ಐತಿಹಾಸಿಕ ಯಾತ್ರೆಯು ಕೊನೆಗೊಳ್ಳುತ್ತಿದೆ.

ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಕಾರ್ನರ್ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಿದರು. ಅವರು 275 ಕ್ಕೂ ಹೆಚ್ಚು ಯಾತ್ರೆ ಮಾಡುತ್ತಲೇ ಸಂವಹನ ಮಾಡಿದ್ದಾರೆ ಮತ್ತು 100 ಕ್ಕೂ ಹೆಚ್ಚು ಒಂದೆಡೆ ಕುಳಿತು ಸಂವಹನ ಮಾಡಿದ್ದಾರೆ. ಜನರ ಕಷ್ಟ ಆಲಿಸುವುದರ ಜೊತೆಗೆ ಭಾರತ ಹೇಗೆ ಒಂದಾಗ ಬೇಕು ಎನ್ನುವ ಬಗ್ಗೆ ಮಾರತನಾಡಿದ್ದಾರೆ.

ಶ್ರೀನಗರದ ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ರ್ಯಾಲಿ ನಡೆಯುವ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಈ ವೇಳೆ ಭಾರತ್ ಜೋಡೋ ಯಾತ್ರೆಯ ಸ್ಮಾರಕವನ್ನು ಅನಾವರಣಗೊಳಿಸಲಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯು ದಕ್ಷಿಣದಿಂದ ಉತ್ತರಕ್ಕೆ ಸಾಗಿ ಬಂದಿದೆ. ಇದು ದೇಶಾದ್ಯಂತ ಪರಿಣಾಮ ಬೀರಿದೆ ಮತ್ತು ಈ ಯಾತ್ರೆಯು ದೇಶಕ್ಕೆ ಪರ್ಯಾಯ ದೃಷ್ಟಿಕೋನವನ್ನು ನೀಡಿದೆ ಎಂದು ಅವರು ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...