Homeಮುಖಪುಟಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

ಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

- Advertisement -
- Advertisement -

ಕಾಶ್ಮೀರದ ಶ್ರೀನಗರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದು, ಇಂದು ನಡೆಯಲಿರುವ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯ ಸಮಾರೋಪ ಸಮಾರಂಭದ ಸಂಭ್ರಮಾಚರಣೆಯ ಉತ್ಸಾಹವನ್ನು ಕುಗ್ಗಿಸಬಹುದು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 135 ದಿನಗಳ ಸುದೀರ್ಘ ಕಾಲ ಸಾಗಿ ಬಂದಿರುವ ಈ ಯಾತ್ರೆ ಇದೀಗ ಅಂತಿಮ ಘಟ್ಟ ತಲುಪಿದೆ.

ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮೆಗಾ ರ್ಯಾಲಿಯನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕತ್ವದಲ್ಲಿ ನಡೆಯುತ್ತಿರುವ ಈ ರ್ಯಾಲಿಯಲ್ಲಿ ವಿರೋಧ ಪಕ್ಷಗಳ ಹನ್ನೆರಡು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ನಡುವೆ ಹಿಮಪಾತವಾಗುತ್ತಿರುವುದರಿಂದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚುವಂತೆ ಸ್ಥಿತಿ ಎದುರಾಗಿದೆ ಮತ್ತು ವಿಮಾನ ಸಂಚಾರಕ್ಕೂ ಅಡ್ಡಿಪಡಿಸಬಹುದು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯ ಅಂತಿಮ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದ್ದ ಹಲವು ವಿರೋಧ ಪಕ್ಷದ ನಾಯಕರು ಭಾಗವಹಿಸಲು ಸಾಧ್ಯವಾಗದಿರಬಹುದು.

ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ಟ್ವಿಟ್ ಮಾಡಿದ್ದು, “ನಿರಂತರವಾಗಿ ಹಿಮ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಾಗಿದೆ ಹಾಗಾಗಿ ಶ್ರೀನಗರಕ್ಕೆ ಬರುವ ಎಲ್ಲಾ ವಿಮಾನಗಳು ವಿಳಂಬವಾಗಿವೆ” ಎಂದು ಶ್ರೀನಗರದ ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ತಿಳಿಸಿದ್ದಾರೆ.

ವಿಸ್ತಾರಾ ಏರ್‌ಲೈನ್ಸ್ ದೆಹಲಿಯಿಂದ ಶ್ರೀನಗರಕ್ಕೆ ಹೊರಡುವ ತನ್ನ ಎರಡೂ ವಿಮಾನಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಿದೆ.

ಸಮಾರೋಪ ಸಮಾರಂಭವು ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಲಿದ್ದು, ನಂತರ ಕ್ರೀಡಾಂಗಣದಲ್ಲಿ ರ್ಯಾಲಿ ನಡೆಯಲಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ.

ರಾಹುಲ್ ಗಾಂಧಿ ಅವರು, ಭಾನುವಾರ ಲಾಲ್ ಚೌಕ್ ಪ್ರದೇಶದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ “ಪಾದಯಾತ್ರೆ” ಮುಕ್ತಾಯಗೊಳಿಸಿದರು. ಆದರೆ ಶ್ರೀನಗರದಲ್ಲಿ ಹಿಮಪಾತವಾಗಿರುವುದರಿಂದ, ಸೋಮವಾರ ನಡೆಯುವ ಅಧಿಕೃತ ಸಮಾರೋಪ ಕಾರ್ಯಕ್ರಮದ ಉತ್ಸಾಹವನ್ನು ಕುಗ್ಗಿಸುಬಹುದು.

ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿಪಿಐ, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಗಳು ಈ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೃಢಪಡಿಸಿವೆ.

ಕನ್ಯಾಕುಮಾರಿಯಿಂದ ಕಾಶ್ಮೀರ ಯಾತ್ರೆಯು ದೇಶದ ದಕ್ಷಿಣ ತುದಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಯಿತು ಮತ್ತು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 3,970 ಕಿಮೀ ಕ್ರಮಿಸಿದ ನಂತರ ಶ್ರೀನಗರದಲ್ಲಿ ಇಂದು ಐತಿಹಾಸಿಕ ಯಾತ್ರೆಯು ಕೊನೆಗೊಳ್ಳುತ್ತಿದೆ.

ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಕಾರ್ನರ್ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಿದರು. ಅವರು 275 ಕ್ಕೂ ಹೆಚ್ಚು ಯಾತ್ರೆ ಮಾಡುತ್ತಲೇ ಸಂವಹನ ಮಾಡಿದ್ದಾರೆ ಮತ್ತು 100 ಕ್ಕೂ ಹೆಚ್ಚು ಒಂದೆಡೆ ಕುಳಿತು ಸಂವಹನ ಮಾಡಿದ್ದಾರೆ. ಜನರ ಕಷ್ಟ ಆಲಿಸುವುದರ ಜೊತೆಗೆ ಭಾರತ ಹೇಗೆ ಒಂದಾಗ ಬೇಕು ಎನ್ನುವ ಬಗ್ಗೆ ಮಾರತನಾಡಿದ್ದಾರೆ.

ಶ್ರೀನಗರದ ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ರ್ಯಾಲಿ ನಡೆಯುವ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಈ ವೇಳೆ ಭಾರತ್ ಜೋಡೋ ಯಾತ್ರೆಯ ಸ್ಮಾರಕವನ್ನು ಅನಾವರಣಗೊಳಿಸಲಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯು ದಕ್ಷಿಣದಿಂದ ಉತ್ತರಕ್ಕೆ ಸಾಗಿ ಬಂದಿದೆ. ಇದು ದೇಶಾದ್ಯಂತ ಪರಿಣಾಮ ಬೀರಿದೆ ಮತ್ತು ಈ ಯಾತ್ರೆಯು ದೇಶಕ್ಕೆ ಪರ್ಯಾಯ ದೃಷ್ಟಿಕೋನವನ್ನು ನೀಡಿದೆ ಎಂದು ಅವರು ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...