Homeಮುಖಪುಟಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

ಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

- Advertisement -
- Advertisement -

ಕಾಶ್ಮೀರದ ಶ್ರೀನಗರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದು, ಇಂದು ನಡೆಯಲಿರುವ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯ ಸಮಾರೋಪ ಸಮಾರಂಭದ ಸಂಭ್ರಮಾಚರಣೆಯ ಉತ್ಸಾಹವನ್ನು ಕುಗ್ಗಿಸಬಹುದು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 135 ದಿನಗಳ ಸುದೀರ್ಘ ಕಾಲ ಸಾಗಿ ಬಂದಿರುವ ಈ ಯಾತ್ರೆ ಇದೀಗ ಅಂತಿಮ ಘಟ್ಟ ತಲುಪಿದೆ.

ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮೆಗಾ ರ್ಯಾಲಿಯನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕತ್ವದಲ್ಲಿ ನಡೆಯುತ್ತಿರುವ ಈ ರ್ಯಾಲಿಯಲ್ಲಿ ವಿರೋಧ ಪಕ್ಷಗಳ ಹನ್ನೆರಡು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ನಡುವೆ ಹಿಮಪಾತವಾಗುತ್ತಿರುವುದರಿಂದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚುವಂತೆ ಸ್ಥಿತಿ ಎದುರಾಗಿದೆ ಮತ್ತು ವಿಮಾನ ಸಂಚಾರಕ್ಕೂ ಅಡ್ಡಿಪಡಿಸಬಹುದು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯ ಅಂತಿಮ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದ್ದ ಹಲವು ವಿರೋಧ ಪಕ್ಷದ ನಾಯಕರು ಭಾಗವಹಿಸಲು ಸಾಧ್ಯವಾಗದಿರಬಹುದು.

ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ಟ್ವಿಟ್ ಮಾಡಿದ್ದು, “ನಿರಂತರವಾಗಿ ಹಿಮ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಾಗಿದೆ ಹಾಗಾಗಿ ಶ್ರೀನಗರಕ್ಕೆ ಬರುವ ಎಲ್ಲಾ ವಿಮಾನಗಳು ವಿಳಂಬವಾಗಿವೆ” ಎಂದು ಶ್ರೀನಗರದ ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ತಿಳಿಸಿದ್ದಾರೆ.

ವಿಸ್ತಾರಾ ಏರ್‌ಲೈನ್ಸ್ ದೆಹಲಿಯಿಂದ ಶ್ರೀನಗರಕ್ಕೆ ಹೊರಡುವ ತನ್ನ ಎರಡೂ ವಿಮಾನಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಿದೆ.

ಸಮಾರೋಪ ಸಮಾರಂಭವು ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಲಿದ್ದು, ನಂತರ ಕ್ರೀಡಾಂಗಣದಲ್ಲಿ ರ್ಯಾಲಿ ನಡೆಯಲಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ.

ರಾಹುಲ್ ಗಾಂಧಿ ಅವರು, ಭಾನುವಾರ ಲಾಲ್ ಚೌಕ್ ಪ್ರದೇಶದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ “ಪಾದಯಾತ್ರೆ” ಮುಕ್ತಾಯಗೊಳಿಸಿದರು. ಆದರೆ ಶ್ರೀನಗರದಲ್ಲಿ ಹಿಮಪಾತವಾಗಿರುವುದರಿಂದ, ಸೋಮವಾರ ನಡೆಯುವ ಅಧಿಕೃತ ಸಮಾರೋಪ ಕಾರ್ಯಕ್ರಮದ ಉತ್ಸಾಹವನ್ನು ಕುಗ್ಗಿಸುಬಹುದು.

ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿಪಿಐ, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಗಳು ಈ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೃಢಪಡಿಸಿವೆ.

ಕನ್ಯಾಕುಮಾರಿಯಿಂದ ಕಾಶ್ಮೀರ ಯಾತ್ರೆಯು ದೇಶದ ದಕ್ಷಿಣ ತುದಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಯಿತು ಮತ್ತು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 3,970 ಕಿಮೀ ಕ್ರಮಿಸಿದ ನಂತರ ಶ್ರೀನಗರದಲ್ಲಿ ಇಂದು ಐತಿಹಾಸಿಕ ಯಾತ್ರೆಯು ಕೊನೆಗೊಳ್ಳುತ್ತಿದೆ.

ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಕಾರ್ನರ್ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಿದರು. ಅವರು 275 ಕ್ಕೂ ಹೆಚ್ಚು ಯಾತ್ರೆ ಮಾಡುತ್ತಲೇ ಸಂವಹನ ಮಾಡಿದ್ದಾರೆ ಮತ್ತು 100 ಕ್ಕೂ ಹೆಚ್ಚು ಒಂದೆಡೆ ಕುಳಿತು ಸಂವಹನ ಮಾಡಿದ್ದಾರೆ. ಜನರ ಕಷ್ಟ ಆಲಿಸುವುದರ ಜೊತೆಗೆ ಭಾರತ ಹೇಗೆ ಒಂದಾಗ ಬೇಕು ಎನ್ನುವ ಬಗ್ಗೆ ಮಾರತನಾಡಿದ್ದಾರೆ.

ಶ್ರೀನಗರದ ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ರ್ಯಾಲಿ ನಡೆಯುವ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಈ ವೇಳೆ ಭಾರತ್ ಜೋಡೋ ಯಾತ್ರೆಯ ಸ್ಮಾರಕವನ್ನು ಅನಾವರಣಗೊಳಿಸಲಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯು ದಕ್ಷಿಣದಿಂದ ಉತ್ತರಕ್ಕೆ ಸಾಗಿ ಬಂದಿದೆ. ಇದು ದೇಶಾದ್ಯಂತ ಪರಿಣಾಮ ಬೀರಿದೆ ಮತ್ತು ಈ ಯಾತ್ರೆಯು ದೇಶಕ್ಕೆ ಪರ್ಯಾಯ ದೃಷ್ಟಿಕೋನವನ್ನು ನೀಡಿದೆ ಎಂದು ಅವರು ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...